ಶಿಡ್ಲಘಟ್ಟ ತಾಲ್ಲೂಕಿನ ಔಷಧಿ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಹಾಗೂ ನಗರದ ಕುಮಾರ್ ಮೆಡಿಕಲ್ಸ್ ಮಾಲೀಕ ಬಿ.ಕೆ.ಸತೀಶ್ ಕುಮಾರ(58) ಶನಿವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಪತ್ನಿ, ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಹ್ನ ಹಿಂದು ರುದ್ರಭೂಮಿಯಲ್ಲಿ ನೆರವೇರಿಸಲಾಯಿತು. ತಾಲ್ಲೂಕಿನ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ತಾಲ್ಲುಕು ಬಲಿಜ ಸಂಘದ ಸದಸ್ಯರು ಮತ್ತಿತರರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.