Home News ನಿಧನ ವಾರ್ತೆ

ನಿಧನ ವಾರ್ತೆ

0

ನಗರದ ವೆಂಕಟೇಶ್ವರ ಚಿತ್ರಮಂದಿರದ ಮಾಲೀಕರಾದ ಎನ್‌.ಶಿವಕುಮಾರ್‌(69) ಅವರು ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ವೆಂಕಟೇಶ್ವರ ಚಿತ್ರಮಂದಿರದ ಹಿಂಭಾಗ ಅವರದೇ ಸ್ಥಳದಲ್ಲಿ ನೆರವೇರಿಸಲಾಯಿತು.
ಸಂಸದ ಕೆ.ಎಚ್‌.ಮುನಿಯಪ್ಪ, ಶಾಸಕ ಎಂ.ರಾಜಣ್ಣ, ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ, ಮಾಜಿ ಶಾಸಕರಾದ ಶ್ರೀನಿವಾಸಗೌಡ, ಬಚ್ಚೇಗೌಡ ಮತ್ತಿತರರು ಮೃತರ ದರ್ಶನ ಪಡೆದರು.