ಭೂ ಮಂಜೂರಾತಿ ಸಮಿತಿ ಸದಸ್ಯ, ಕಾಂಗ್ರೆಸ್ ಪಕ್ಷದ ಮುಖಂಡರೂ ಆದ ಸಾದಲಿ ಜೈ ಪ್ರಕಾಶ್(೬೭) ಶುಕ್ರವಾರ ನಿಧನರಾಗಿದ್ದಾರೆ.
ತಾಲ್ಲೂಕಿನ ಸಾದಲಿವಾಸಿಯಾದ ಸಾದಲಿ ಜೈ ಪ್ರಕಾಶ್ರವರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇತ್ತೀಚಿಗೆ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ರಾತ್ರಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗಲೆ ಇಹಲೋಕ ತ್ಯಜಿಸಿದ್ದಾರೆ.
ಮೃತರ ಅಂತಿಮ ಸಂಸ್ಕಾರ ಶನಿವಾರ ಸಂಜೆ ಅವರ ಸಾದಲಿಯ ಹೊಲದಲ್ಲಿ ನಡೆದಿದ್ದು ಶಾಸಕ ಎಂ.ರಾಜಣ್ಣ, ಮಾಜಿ ಸಚಿವ ವಿ.ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ, ಸಾದಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋವಿಂದರಾಜು ಸೇರಿದಂತೆ ಹಲವು ಪ್ರಮುಖರು ಅಂತಿಮ ದರ್ಶನದಲ್ಲಿ ಭಾಗವಹಿಸಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







