Home News ನಿಧನ ವಾರ್ತೆ

ನಿಧನ ವಾರ್ತೆ

0

ಶ್ರೀಸರಸ್ವತಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷೆ ವಿ.ಸೀತಾಲಕ್ಷ್ಮೀ(೬೩) ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ ೧೫ ದಿನಗಳಿಂದಲೂ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿ ಆಗದೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ.
ನಗರದ ಶ್ರೀಸರಸ್ವತಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಆಗಿ, ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದ ಅವರು, ಗೈಡ್ ಕ್ಯಾಪ್ಟನ್ ಆಗಿ ದೇಶದ ಹಲವು ರಾಜ್ಯಗಳಲ್ಲಿ ನಡೆದ ಶಿಬಿರಗಳಲ್ಲಿ ಭಾಗವಹಿಸಿದ್ದರು.
ಉತ್ತಮ ಶಿಕ್ಷಕಿ ಪ್ರಶಸ್ತಿ, ಎಸ್.ರಾಧಾಕೃಷ್ಣನ್ ಪ್ರಶಸ್ತಿ ಪುರಸ್ಕೃತರು ಆಗಿದ್ದ ಅವರು ಸೀನಿಯರ್ ಗೈಡ್ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಪಡೆದಿದ್ದರು.
ಶ್ರೀಸರಸ್ವತಿ ಕಾನ್ವೆಂಟ್‌ನ ಕಾರ್ಯದರ್ಶಿ ಎನ್.ಶ್ರೀಕಾಂತ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.