ನಗರದ ವಾಸವಿ ರಸ್ತೆಯಲ್ಲಿರುವ ವಾಯುಪುತ್ರ ಪ್ರಾವಿಷನ್ ಸ್ಟೋರ್ಸ್ ಅಂಗಡಿಯ ಮೇಲೆ ಗುರುವಾರ ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಅಂಗಡಿಯಲ್ಲಿದ್ದ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡರು.
ಈ ಬಗ್ಗೆ ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ ಮಾತನಾಡಿ, ಸರ್ಕಾರ ಈಗಾಗಲೇ ಪ್ಲಾಸ್ಟಿಕ್ ನಿಷೇಧಿಸಿರುವುದರಿಂದ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಸುವುದು ಕಾನೂನು ಬಾಹಿರವಾಗುತ್ತದೆ. ಈ ಬಗ್ಗೆ ನಗರದ ವರ್ತಕರನ್ನು ನಗರಸಭೆ ಕಾರ್ಯಾಲಯಕ್ಕೆ ಕರೆಸಿ ಸಭೆ ನಡೆಸಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಕವರ್ ಸೇರಿದಂತೆ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡದಂತೆ ಸೂಚಿಸಲಾಗಿತ್ತು. ಆದರೆ ನಗರದ ವಾಸವಿ ರಸ್ತೆಯಲ್ಲಿರುವ ವಾಯುಪುತ್ರ ಪ್ರಾವಿಷನ್ ಸ್ಟೋರ್ಸ್ನ ಮಾಲೀಕರು ಸಾಕಷ್ಟು ಪ್ರಮಾಣದ ಪ್ಲಾಸ್ಟಿಕ್ ವಸ್ತುಗಳನ್ನು ತಮ್ಮ ಅಂಗಡಿ ಹಾಗೂ ಗೋದಾಮಿನಲ್ಲಿ ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಕಾರಣ ಇಂದು ನಮ್ಮ ಸಿಬ್ಬಂದಿಯೊಂದಿಗೆ ಅಂಗಡಿ ಮೇಲೆ ದಾಳಿ ನಡೆಸಿ ಅಂಗಡಿಯಲ್ಲಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಘಟನೆಯ ಬಗ್ಗೆ ತಹಸೀಲ್ದಾರ್ರಿಗೂ ಮಾಹಿತಿ ನೀಡಿದ್ದು ಅಂಗಡಿಯ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಆಂಜಿನಪ್ಪ, ಸಿಬ್ಬಂದಿ ಮಧು, ಮುರಳಿ, ನಾರಾಯಣಸ್ವಾಮಿ ಹಾಜರಿದ್ದರು.
- Advertisement -
- Advertisement -
- Advertisement -