19.1 C
Sidlaghatta
Sunday, October 26, 2025

ನೀರಾವರಿ ಹೋರಾಟಕ್ಕೆ ಸ್ತ್ರೀ ಶಕ್ತಿ ಸಂಘಟನೆಗಳ ಸದಸ್ಯರ ಬೆಂಬಲ

- Advertisement -
- Advertisement -

ಕರ್ನಾಟಕ ರಾಜ್ಯ ರೈತ ಸಂಘಟನೆ ನಡೆಸುತ್ತಿರುವ ಶಾಶ್ವತ ನೀರಾವರಿ ಹೋರಾಟವನ್ನು ಬೆಂಬಲಿಸಿ ತಾಲ್ಲೂಕಿನ ಸ್ತ್ರೀ ಶಕ್ತಿ ಸಂಘಟನೆಗಳ ಸದಸ್ಯರು ಬುಧವಾರ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟನೆಯನ್ನು ನಡೆಸಿ ತಹಶೀಲ್ದಾರ್ ಅವರಿಗೆ ಮನವಿಪತ್ರವನ್ನು ಸಲ್ಲಿಸಿದರು.
ಬಯಲು ಸೀಮೆಯ ಆರು ಜಿಲ್ಲೆಗಳಿಗೆ ಶಾಶ್ವತವಾದ ನೀರಿನ ಅಗತ್ಯವಿದೆ. ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ನಡೆಯುತ್ತಿರುವ 59 ನೇ ದಿನದ ಧರಣಿಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಸ್ತ್ರೀ ಶಕ್ತಿ ಸಂಘಟನೆಗಳ ಸದಸ್ಯರು ಪಾಲ್ಗೊಂಡು ಬೆಂಬಲಿಸಲಿದ್ದೇವೆ. ಕುಡಿಯಲು ಮತ್ತು ವ್ಯವಸಾಯಕ್ಕೆ ರೈತಾಪಿ ಜನ ನೀರಿಲ್ಲದೆ ಕಷ್ಟಕರ ಪರಿಸ್ಥಿತಿಯನ್ನೆದುರಿಸುತ್ತಿದ್ದಾರೆ. ಅನ್ನದಾತ ಹಳ್ಳಿಗಳನ್ನು ತೊರೆದು ನಗರಗಳಿಗೆ ಈಗಾಗಲೇ ವಲಸೆ ಹೋಗಲು ಪ್ರಾರಂಭಿಸಿದ್ದಾರೆ. ಸರ್ಕಾರ ಆದಷ್ಟು ಬೇಗ ಎಚ್ಚೆತ್ತು ಶಾಶ್ವತ ನೀರಿನ ಯೋಜನೆಯನ್ನು ಪ್ರಾರಂಭಿಸುವಂತೆ ಒತ್ತಾಯಿಸಿದರು.
ತಹಶೀಲ್ದಾರ್ ಅನುಪಸ್ಥಿತಿಯಲ್ಲಿ ತಾಲ್ಲೂಕಿನ ಸ್ತ್ರೀ ಶಕ್ತಿ ಸಂಘಟನೆಗಳ ಸದಸ್ಯರು ಮನವಿಪತ್ರವನ್ನು ಶಿರಸ್ತೆದಾರರಿಗೆ ನೀಡಿದರು.
ತಾಲ್ಲೂಕಿನ ಸ್ತ್ರೀ ಶಕ್ತಿ ಸಂಘಟನೆಗಳ ಸದಸ್ಯರಾದ ಭಾರತಿ, ನಂಜಮ್ಮ, ಗೌರಮ್ಮ, ಲಕ್ಷ್ಮೀ, ರೈತಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಗುಡಿಹಳ್ಳಿ ಕೆಂಪಣ್ಣ, ಆನೂರು ದೇವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!