ನುಡಿ ನೆಲ ಜಲದ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ

- Advertisement -
- Advertisement -

ಕನ್ನಡ ನಾಡು ನುಡಿ ನೆಲ ಜಲದ ರಕ್ಷಣೆ ಈ ನೆಲದಲ್ಲಿ ಮಣ್ಣಿನ ಋಣಹೊತ್ತ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷ ನಾಗೇನಹಳ್ಳಿ ಕೃಷ್ಣಮೂರ್ತಿ ಹೇಳಿದರು.
ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ತಾಲ್ಲೂಕು ಘಟಕದಿಂದ ಶನಿವಾರ ಹಮ್ಮಿಕೊಂಡಿದ್ದ ದಿಬ್ಬೂರಹಳ್ಳಿಯ ಶಾಖೆಯ ಉದ್ಘಾಟನೆ, ನಾಮಫಲಕ ಅನಾವರಣ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕನ್ನಡಿಗರು ವಿಶಾಲ ಹೃದಯವರು. ಎಲ್ಲ ಭಾಷೆ ಭಾಷಿಗರನ್ನೂ ಪ್ರೀತಿಸುತ್ತಾರೆ, ಬರ ಮಾಡಿಕೊಳ್ಳುತ್ತಾರೆ ವಿಶ್ವಾಸದಿಂದ ನೋಡುತ್ತಾರೆ. ಹಾಗಂತ ನಿರಭಿಮಾನಿಗಳಲ್ಲ, ಅಶಕ್ತರೂ ಅಲ್ಲ, ಕನ್ನಡ ನಾಡು ನುಡಿ ನೆಲ ಜಲಕ್ಕೆ ದಕ್ಕೆ ಬರುವುದಾದರೆ ಸೆಟೆದು ನಿಂತು ಯಾರನ್ನಾದರೂ ಎಂತಹ ಶಕ್ತಿಯನ್ನಾದರೂ ತಡೆದು ನಿಲ್ಲಿಸಬಲ್ಲ ನಿಜವಾದ ಶೂರರು ಎಂದರು.
ನಮ್ಮ ಸಂಘಟನೆ ಸೇರಿದಂತೆ ಇತರೆ ಸಂಘಟನೆಗಳ ಕೇವಲ ನಾಡು ನುಡಿ ನೆಲ ಜಲದ ರಕ್ಷಣೆಯ ಬಗ್ಗೆ ಮಾತ್ರ ಹೋರಾಟ ಮಾಡುತ್ತಿಲ್ಲ. ಬದಲಿಗೆ ಶಾಶ್ವತ ನೀರಾವರಿ ಸಮಸ್ಯೆ, ರೈತರ ಉತ್ಪಾದನೆಗಳಿಗೆ ಬೆಲೆ ಕುಸಿತ, ನಿರುದ್ಯೋಗ ಸಮಸ್ಯೆ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಚಿತ್ರ ನಟರಾದ ಸಾಯಿಕುಮಾರ್, ಅಭಿರಾಮ್ ಸಿನಿಮಾದ ವಾಕ್ಯಗಳನ್ನು ಹೇಳಿ ಸಭಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು.
ಕಾರ್ಯಕ್ರಮಕ್ಕೂ ಮುನ್ನ ಹಂಡಿಗನಾಳದಿಂದ, ಕೆ.ಮುತ್ತುಕದಹಳ್ಳಿ ಮೂಲಕ ದಿಬ್ಬೂರಹಳ್ಳಿವರೆಗೂ ಕನ್ನಡ ಧ್ವಜ ಹೊತ್ತ ನೂರಾರು ಬೈಕ್, ಕಾರು, ಆಟೋಗಳ ಮೆರವಣಿಗೆ ನಡೆಯಿತು. ಮೆರವಣಿಗೆಯ ಉದ್ದಗಲಕ್ಕೂ ಕನ್ನಡ ತಾಯಿಗೆ ಜೈಕಾರಗಳು ಮೊಳಗಿದವು.
ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡ, ಸಂಘಟನಾ ಕಾರ್ಯದರ್ಶಿ ನವೀನ್ ರೆಡ್ಡಿ, ತಾಲೂಕು ಅಧ್ಯಕ್ಷ ಬೈರಾರೆಡ್ಡಿ, ಜಿಲ್ಲಾಧ್ಯಕ್ಷ ಶಿವಪ್ರಕಾಶ್, ನಗರಘಟಕದ ಅಧ್ಯಕ್ಷ ಮಧುಕುಮಾರ್, ಸುರೇಶ್ ಹಾಜರಿದ್ದರು.
 

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!