ತಾಲ್ಲೂಕು ದಂಡಾಧಿಕಾರಿಯಾಗಿ ಕೆ.ಎಂ. ಮನೋರಮಾ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಶಿಡ್ಲಘಟ್ಟ ತಹಶೀಲ್ದಾರ್ ಆಗಿ ಅಧಿಕಾರವಹಿಸಿಕೊಂಡಿದ್ದಾರೆ. ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜಿ.ಎ.ನಾರಾಯಣಸ್ವಾಮಿ ಅವರನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಅಧಿಕಾರವಹಿಸಿಕೊಂಡ ನಂತರ ಕೆ.ಎಂ. ಮನೋರಮಾ, ವಿಧಾನಪರಿಷತ್ತಿನ ಚುನಾವಣೆಯನ್ನು ಮುಕ್ತವಾಗಿ ಮಾಡಲು ಆದ್ಯತೆ ನೀಡುವುದಾಗಿ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ತಾಲ್ಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದೆಂದರು.