ನಗರದ ಹೊರವಲಯದ ಪೂಜಮ್ಮ ದೇವಿಯ ದೇವಸ್ಥಾನದಿಂದ ನೆಲ್ಲಿಮರದಹಳ್ಳಿ ಹಾಗೂ ಹನುಮಂತಪುರಕ್ಕೆ ಹೋಗುವ ರಸ್ತೆಯು ಕೆಸರಿನ ಆಗರವಾಗಿದ್ದು, ಸಾರ್ವಜನಿಕರು ಈ ಬಗ್ಗೆ ಅಧಿಕಾರಿಗಳನ್ನು ಎಚ್ಚರಿಸಲು ಶನಿವಾರ ಪ್ರತಿಭಟನೆಯನ್ನು ಆಯೋಜಿಸಿದ್ದಾರೆ.
ಈ ಭಾಗದಲ್ಲಿ ಡಾಲ್ಫಿನ್ ಪಬ್ಲಿಕ್ ಶಾಲೆ, ಹಾಲು ಉತ್ಪಾದಕರ ಸಹಕಾರ ಸಂಘ, ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ, ಮಸೀದಿ, ಸರ್ಕಾರಿ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರಗಳಿವೆ. ಇಲ್ಲಿನ ರಸ್ತೆಗಳಲ್ಲಿನ ಕೆಸರು, ಗದ್ದೆಯ ರೂಪದಲ್ಲಿದ್ದು, ನಡೆದಾಡುವುದೇ ಕಷ್ಟಕರವಾಗಿರುವಾಗ ದ್ವಿಚಕ್ರ ವಾಹನಗಳು ಸಾಗುವುದು ಇನ್ನೂ ದುಸ್ಥರವಾಗಿದೆ.

- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







