ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರಕಿದ್ದರೂ ಕೂಡಾ ಇಂದಿಗೂ ಭಾಷೆಯ ಉಳಿವಿಗಾಗಿ ಹೋರಾಟ ನಡೆಸಬೇಕಾದಂತಹ ದುಸ್ಥಿತಿ ಒದಗಿ ಬಂದಿರುವುದು ಶೋಚನೀಯ ಸಂಗತಿಯಾಗಿದೆ ಎಂದು ಕನ್ನಡಪರ ಹೋರಾಟಗಾರ ಖ.ರಾ.ಖಂಡೇರಾವ್ ಹೇಳಿದರು.
ನಗರದ ಹಳೆ ಅಂಚೆ ಕಚೇರಿ ರಸ್ತೆಯ ಸ್ನೇಹ ಯುವಕ ಸಂಘ ಬುಧವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯ ಎಂದ ಅವರು ರಾಜ್ಯದ ಗಡಿ, ನೆಲ, ಜಲ, ಭಾಷೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿಬೆಳೆಸುವಂತಹ ಹೊಣೆಗಾರಿಕೆ ಪ್ರತಿಯೊಬ್ಬ ನಾಗರೀಕರ ಮೇಲಿದೆ. ಅದರಲ್ಲೂ ವಿಶೇಷವಾಗಿ ಯುವಜನತೆ ನಾಡಿನ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಮಾತನಾಡಿ, ರಾಜ್ಯದಲ್ಲಿ ಕನ್ನಡ ಭಾಷೆ ಉಳಿದಿದೆಯೆಂದರೆ ಅದು ಕೇವಲ ಗ್ರಾಮೀಣ ಪ್ರದೇಶಗಳಿಂದ ಮಾತ್ರ, ಇಂದು ಬದಲಾಗುತ್ತಿರುವ ಜನರ ಜೀವನಶೈಲಿಯಿಂದಾಗಿ ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆಯನ್ನು ಹುಡುಕಾಡಬೇಕಾದಂತಹ ದುಸ್ಥಿತಿ ಒದಗಿ ಬಂದಿದೆ. ಎಲ್ಲಾ ರಾಜ್ಯಗಳ ಜನತೆಗೆ ಆಸರೆಯನ್ನು ನೀಡುತ್ತಾ ಸಹೃದಯತೆಯಿಂದ ಎಲ್ಲರನ್ನೂ ಸ್ವಾಗತಿಸುವಂತಹ ರಾಜ್ಯದಲ್ಲಿ ಅನ್ಯ ಬಾಷಿಕರಿಂದ ಕನ್ನಡಿಗರ ಮೇಲೆ ನಿರಂತರವಾಗಿ ದೌರ್ಜನ್ಯಗಳು, ದಬ್ಬಾಳಿಕೆಗಳು ನಡೆಯುತ್ತಲೇ ಇವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುವ ಮೂಲಕ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಆದೇಶಗಳನ್ನು ಕನ್ನಡ ಭಾಷೆಯಲ್ಲಿಯೆ ಹೊರಡಿಸಬೇಕು ಎಂದರು.
ಎನ್.ಭರತ್, ಡಿ.ವಿ.ವೆಂಕಟೇಶ್, ಮುನಿರಾಜು, ಬಿ.ಸಿ.ನಂದೀಶ್, ನವೀನ್. ಶ್ರೀನಿವಾಸ್, ಸಂಜೀವಪ್ಪ, ಉದಯ್, ಮಂಜುನಾಥ್, ಸುನಿಲ್ ಹಾಜರಿದ್ದರು.
- Advertisement -
- Advertisement -
- Advertisement -







