19.5 C
Sidlaghatta
Sunday, July 20, 2025

ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ರಾಗಿಣಿಯವರಿಗೆ ಸನ್ಮಾನ

- Advertisement -
- Advertisement -

ತಮ್ಮ ಎರಡೂವರೆ ದಶಕಗಳ ಸೇವಾವಧಿಯಲ್ಲಿ ನ್ಯಾಯಾಂಗ ಇಲಾಖೆಯ ಗೌರವ ಹಾಗು ಘನತೆಗೆ ಧಕ್ಕೆ ಬಾರದಂತೆ ಸೇವೆ ಸಲ್ಲಿಸಿ ಇದೀಗ ಸ್ವಯಂ ನಿವೃತ್ತಿ ಪಡೆದಿರುವ ರಾಗಿಣಿಯವರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಮಂಜುನಾಥ್ ಹಾರೈಸಿದರು.
ನಗರದ ನ್ಯಾಯಾಂಗ ಇಲಾಖೆಯಲ್ಲಿ ಸುಮಾರು ೨೫ ವರ್ಷಗಳ ಕಾಲ ಸಹಾಯಕಿಯಾಗಿ ಸೇವೆ ಸಲ್ಲಿಸಿ ಅನಾರೋಗ್ಯದ ಕಾರಣ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದ ರಾಗಿಣಿಯವರನ್ನು ಈಚೆಗೆ ಸನ್ಮಾನಿಸಿ ಅವರು ಮಾತನಾಡಿದರು.
ಕಳೆದ ಎರಡೂವರೆ ದಶಕಗಳ ಕಾಲ ನ್ಯಾಯಾಂಗ ಇಲಾಖೆಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸಿ ನ್ಯಾಯಾಲಯದ ಸಿಬ್ಬಂದಿ ಸೇರಿದಂತೆ ನಾಗರಿಕರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದ ರಾಗಿಣಿಯವರು ಅನಾರೋಗ್ಯದ ಕಾರಣ ಸ್ವಯಂ ನಿವೃತ್ತಿಗಾಗಿ ಜಿಲ್ಲಾ ನ್ಯಾಯಾಧೀಶರಿಗೆ ಅರ್ಜಿ ಸಲ್ಲಿಸಿದ್ದರು.
ಜಿಲ್ಲಾ ನ್ಯಾಯಾಧೀಶರ ಆಧೇಶದ ಮೇರೆಗೆ ಸೇವೆಯಿಂದ ಫೆಬ್ರುವರಿ ೨೮ ರಂದು ನಿವೃತ್ತಿ ಹೊಂದಿರುವ ಅವರ ನಿವೃತ್ತಿ ಜೀವನವನ್ನು ಸುಖಕರವಾಗಿರಲು ಮಕ್ಕಳು ಉತ್ತಮ ವಾತಾವರಣ ಕಲ್ಪಿಸಿಕೊಡಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎನ್.ಎ.ಶ್ರೀಕಂಠ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಟಿ.ಎಲ್.ಸಂದೀಶ್, ಶಿರಸ್ತೇದಾರ್ ದೇವರಾಜ್, ಅಂಬುಜಮ್ಮ, ಸಿಬ್ಬಂದಿ ಮುರಳೀಧರ, ಉಮಾಶಂಕರ್ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!