ಪಂಚಾಯತಿ ಸದಸ್ಯರ ಸ್ಪಷ್ಟನೆ

- Advertisement -
- Advertisement -

ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಯಾರಿಗೂ ತಾರತಮ್ಯ ಮಾಡುತ್ತಿಲ್ಲವೆಂದು ಪಂಚಾಯತಿ ಸದಸ್ಯರು ಸ್ಪಷ್ಟನೆ ನೀಡಿದರು.
ನಗರದ ಪ್ರವಾಸಿಮಂದಿರದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ, ಆನೆಮಡಗು ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಜೆಡಿಎಸ್ ಬೆಂಬಲಿತ ಸದಸ್ಯರು ಸ್ಪಷ್ಟನೆ ನೀಡಿದರು.
ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯತಿ ಕಚೇರಿಗೆ ಈಚೆಗೆ ಬೀಗ ಹಾಕಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಅಧ್ಯಕ್ಷರ ಕಾರ್ಯ ವೈಖರಿಯ ವಿರುದ್ಧ ಪ್ರತಿಭಟನೆ ಮಾಡಿದ್ದ ಹಿನ್ನೆಲೆಯಲ್ಲಿ ಅವರು ಮಾತನಾಡಿದರು.
ನಾವು ಯಾವುದೇ ಕಾರಣಕ್ಕೂ ಯಾರಿಗೂ ಅನ್ಯಾಯ ಮಾಡಿಲ್ಲ, ಮಾಜಿ ಅಧ್ಯಕ್ಷ ಗೋಪಾಲರೆಡ್ಡಿ, ಕಳೆದ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಸೋತರು, ಇದರಿಂದ ಅವರು ಹತಾಶರಾಗಿ ಈ ರೀತಿ ಜನರನ್ನು ಎತ್ತಿಕಟ್ತಿದ್ದಾರೆ. ಅವರ ಅವಧಿಯಲ್ಲಿ ಸುಮಾರು ೧೪ ಲಕ್ಷ ಸಾಲವನ್ನು ಪಂಚಾಯತಿಯ ತಲೆ ಮೇಲೆ ಹಾಕಿದ್ದಾರೆ. ದೇವಸ್ಥಾನ ಅಭಿವೃದ್ಧಿಗೆಂದು ನೀಡಿದ್ದ ಒಂದು ಲಕ್ಷ ರೂಪಾಯಿಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಪಂಚಾಯತಿಗೆ ಸೇರಿದ್ದ ತೋಪು ಹರಾಜಿನಲ್ಲಿ ಸುಮಾರು ೫೦ ಲಕ್ಷ ರೂಪಾಯಿಗಳಷ್ಟು ನಷ್ಟ ಮಾಡಿದ್ದಾರೆ. ಗ್ರಾಮ ಪಂಚಾಯತಿಯಲ್ಲಿರುವ ಎಲ್ಲಾ ಸದಸ್ಯರಗಳ ಸಮ್ಮುಖದಲ್ಲೆ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ. ಆದರೂ ಅವರು ವಿನಾಕಾರಣ ಗೊಂದಲ ನಿರ್ಮಾಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಸತ್ಯವಿಲ್ಲ. ನಾವೇ ಬಹಿರಂಗವಾಗಿ ಚರ್ಚೆಗೆ ವ್ಯವಸ್ಥೆ ಮಾಡ್ತೀವಿ ಬಂದು ಭಾಗವಹಿಸಲಿ ಅವರ ಅಕ್ರಮಗಳನ್ನ ದಾಖಲೆಗಳ ಸಮೇತ ಬಹಿರಂಗ ಮಾಡುತ್ತೇವೆ ಎಂದು ಸವಾಲು ಹಾಕಿದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಮುದ್ದುಲಕ್ಷ್ಮಮ್ಮ, ಸದಸ್ಯರಾದ ಆನೆಮಡಗು ಮುರಳಿ, ಗುಮ್ಮರೆಡ್ಡಿ, ಕೆ.ಬೈರಾರೆಡ್ಡಿ, ದೇವರಾಜ್, ಗಂಗಾಧರ, ನರಸಿಂಹಪ್ಪ, ಆಂಜನೇಯರೆಡ್ಡಿ, ಶ್ರೀನಿವಾಸ್, ಮಂಜುನಾಥ್, ಮುನಿನರಸಿಂಹಪ್ಪ, ವೆಂಕಟಸ್ವಾಮಿ, ಮರಿಹಳ್ಳಿ ಶ್ರೀನಿವಾಸ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!