ಬಿ.ಎಸ್.ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಪಕ್ಷದ ಪದಾಧಿಕಾರಿಗಳ ನೇಮಕ ಹಾಗೂ ಪಕ್ಷದ ಸಂಘಟನೆಗೆ ಒತ್ತು ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಗುರುವ ಯಾದವ್ ತಿಳಿಸಿದರು.
ನಗರದ ಚಿಂತಾಮಣಿ ರಸ್ತೆಯಲ್ಲಿರುವ ಹನುಮಾನ್ ವ್ಯಾಯಾಮ ಶಾಲೆಯ ಬಳಿ ಮಯೂರ ವೃತ್ತದ ಯುವಕರ ಸಂಘದ ವತಿಯಿಂದ ಆಯೋಜಿಸಿದ್ದ ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪಕ್ಷದ ಸಂಘಟನೆ ಬಲಪಡಿಸುವ ಕಾರ್ಯದಲ್ಲಿ ಯುವಕರು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಹೇಳಿದರು.
ಬಿಜೆಪಿ ಮುಖಂಡರಾದ ತರಬಳ್ಳಿ ಭಾಸ್ಕರರೆಡ್ಡಿ, ಕೃಷ್ಣಪ್ಪ, ರಾಮಕೃಷ್ಣಪ್ಪ, ಹೇಮಾರ್ಲಹಳ್ಳಿ ನಾಗರಾಜ್, ಬೈರರೆಡ್ಡಿ, ರಂಜಿತ್, ವೇಣು ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -