21.1 C
Sidlaghatta
Friday, March 29, 2024

ಪಕ್ಷದ ಸಾಧನೆಯನ್ನು ಜನರಿಗೆ ಮುಟ್ಟಿಸಿ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಸಾಧನೆಯನ್ನು ಜನರಿಗೆ ಮುಟ್ಟಿಸಿ, ಪಕ್ಷವನ್ನು ಸದೃಢವಾಗಿ ಕಟ್ಟುವಂತಹ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಕೆ.ಪಿ.ಸಿ.ಸಿ.ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ನಾಲ್ಕೂವರೆ ವರ್ಷದ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಈ ಸಮಾವೇಶದ ಉದ್ದೇಶವಾಗಿದೆ. ಈ ಬಾರಿ ಕಾಂಗ್ರೆಸ್ ಗೆಲ್ಲಿಸುವ ಕೆಲಸ ಮಾಡಬೇಕು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಮರ್ಥ ನಾಯಕತ್ವ, ಸ್ವಚ್ಚವಾದ ಆಡಳಿತ, ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಬಡವರ ಹಸಿವು ನೀಗಿಸುವ ಕಾರ್ಯಕ್ರಮವಾಗಿದೆ. 1 ಕೋಟಿ 10 ಲಕ್ಷ ಕುಟುಂಬಗಳು ಯೋಜನೆಯ ಪ್ರಯೋಜನವಾಗಿದೆ. ಬಿಸಿಯೂಟ, ಕ್ಷೀರಭಾಗ್ಯ, ಶುದ್ಧಕುಡಿಯುವ ನೀರಾವರಿಗಾಗಿ 8 ಸಾವಿರ ಕಿರು ನೀರು ಯೋಜನೆಗಳನ್ನು, 3 ಲಕ್ಷ ಕೃಷಿ ಹೊಂಡಗಳನ್ನು ಮಾಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಿಜೆಪಿ ಸಂಸದರೊಟ್ಟಿಗೆ ಪ್ರಧಾನಿ ನರೇಂದ್ರಮೋದಿ ಅವರ ಬಳಿಗೆ ನಿಯೋಗ ಹೋಗಿ ಸಾಲ ಮನ್ನಾ ಮಾಡುವಂತೆ ಮನವಿ ಮಾಡಿದರು ಬರಿಗೈಲಿ ಹಿಂದಿರುಗಬೇಕಾಯಿತು ಎಂದರು.
ಬಿಜೆಪಿ ಸರ್ಕಾರ ಒಂದು ರೂಪಾಯಿಯು ಕೊಡಲಿಲ್ಲ. ಬಿಜೆಪಿ ಆಡಳಿತದಲ್ಲಿ ಜೈಲಿಗೆ ಪರೇಡ್ ಮಾಡಿದರು. ಅಭಿವೃದ್ಧಿ ಮಾಡಲಿಲ್ಲ, ಹೊರದೇಶಗಳಿಂದ ಬಂಡವಾಳ ತರಲಿಲ್ಲ. ನಮ್ಮ ಸರ್ಕಾರ ಭ್ರಷ್ಟವಾಗಿದ್ದರೆ ಸಾಬೀತು ಮಾಡಲಿ. ಅಲ್ಪಸಂಖ್ಯಾತರ ರಕ್ಷಣೆಯಾಗಬೇಕು. ಬಿಜೆಪಿ ಆಡಳಿತದಲ್ಲಿ ಮಸೀದಿ, ಚರ್ಚ್ ಗಳು ಹೊಡೆದರು. ಜೆಡಿಎಸ್ ನವರು ಅವಕಾಶವಾದಿಗಳು, ಅಧಿಕಾರ ನಡೆಸಲಿಕ್ಕೆ ಸಾಧ್ಯವಿಲ್ಲ, ಅಂತಹವರಿಗೆ ಮತ ನೀಡಬೇಡಿ, 2018 ಕ್ಕೆ ಅಧಿಕಾರಕ್ಕೆ ಬಂದೇ ಬರ್ತಿವಿ ಎಂದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ಕಳೆದ ಚುನಾವಣೆಯಲ್ಲಿ ನಿಮ್ಮ ಅಭ್ಯರ್ಥಿಯನ್ನು ಕಳೆದುಕೊಂಡಿದ್ದೀರಿ, ಶಾಸಕ ಎಂ.ರಾಜಣ್ಣ ಒಂದು ದಿನವೂ ಸರ್ಕಾರದ ವಿರುದ್ಧ ವಿಧಾನಸೌಧದಲ್ಲಿ ಮಾತನಾಡಲಿಲ್ಲ. ಎತ್ತಿನಹೊಳೆ ಯೋಜನೆಗೆ 12 ಸಾವಿರ ಕೋಟಿ, ಕೆ.ಸಿ.ವ್ಯಾಲಿ ಯೋಜನೆ, ಹೆಬ್ಬಾಳ ನಾಗವಾರ ಕೆರೆಗಳ ನೀರಿನಿಂದ ಕೆರೆಗಳನ್ನು ತುಂಬಿಸುವುದು, 8165 ಕೋಟಿ ಸಾಲ ಮನ್ನಾ ಮಾಡಿದ್ದೇವೆ. ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿ ಒತ್ತು ನೀಡಿದ್ದೇವೆ ಎಂದರು.
ಎ.ಐ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ಅವರ ಸ್ವಂತ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿರುವುದನ್ನು ನೋಡಿದರೆ ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಅವರ ಕನಸಾಗಿದೆ. ರಾಜ್ಯ ಸರ್ಕಾರ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಶೇ. 80 ರಷ್ಟು ಈಡೇರಿಸಿದೆ. ಮೋದಿಯವರ ಭಾಷಣ ತುಂಬಾ ಚೆನ್ನಾಗಿದೆ. ಕೆಲಸ ಇಲ್ಲ, ಜೆಡಿಎಸ್ ನಮಗೆ ಲೆಕ್ಕಕ್ಕಿಲ್ಲ. ಏಪ್ರಿಲ್ ನಂತರ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಮನೆ ಮನೆಗೆ ಹೋಗಿ, ಜನರಿಗೆ ಸರ್ಕಾರದ ಯೋಜನೆಗಳನ್ನು ತಿಳಿಸಿ ಎಂದರು.
ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡೂರಾವ್, ಕೆ.ಎಚ್.ಮುನಿಯಪ್ಪ, ವಿ.ಮುನಿಯಪ್ಪ, ಕೆ.ಎನ್.ಕೇಶವರೆಡ್ಡಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!