ಪಕ್ಷದ ಸಿದ್ಧಾಂತಗಳಂತೆ ನಡೆದುಕೊಳ್ಳದವರಿಗೆ ಬಿಜೆಪಿ ಪಕ್ಷದಲ್ಲಿ ಸ್ಥಾನವಿಲ್ಲ. ಕಟ್ಟಡಗಳನ್ನು ಕಟ್ಟಿ ಫ್ಲೆಕ್ಸಿಗಳಲ್ಲಿ ಭಾವಚಿತ್ರಗಳನ್ನು ಹಾಕಿಸಿಕೊಂಡ ಮಾತ್ರಕ್ಕೆ ಪಕ್ಷ ಸಂಘಟನೆ ಆಗುವುದಿಲ್ಲ ಎಂದು ಬಿ.ಜೆ.ಪಿ.ಜಿಲ್ಲಾಧ್ಯಕ್ಷ ರವಿನಾರಾಯಣರೆಡ್ಡಿ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಯೋಜನೆ ಮಾಡಲಾಗಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಘ ಪರಿವಾರದ ಅನೇಕ ಮಂದಿ ನಾಯಕರು ಈ ರಾಷ್ಟ್ರದ ಅಭಿವೃದ್ಧಿಗಾಗಿ ಹುಟ್ಟುಹಾಕಿದ ಬಿ.ಜೆ.ಪಿ. ಪಕ್ಷದಲ್ಲಿ ಯಾವೊಬ್ಬ ನಾಯಕರಿಗೂ ಸ್ಥಾನಮಾನವಿಲ್ಲ, ಯಾರಿಂದಲೂ ಪಕ್ಷವಿಲ್ಲ, ಪಕ್ಷವಿರುವುದು ಕಾರ್ಯಕರ್ತರಿಂದ. ಮೊದಲು ಕಾರ್ಯಕರ್ತರಿಗೆ ಅಧಿಕಾರ ಕೊಟ್ಟರೆ, ಅವರು ನಮಗೆ ಅಧಿಕಾರಗಳನ್ನು ಕೊಡುತ್ತಾರೆ. ಮುಖಂಡರು ಕಚ್ಚಾಡುವುದನ್ನು ಬಿಟ್ಟು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಕಾರ್ಯಕರ್ತರ ಮನದಾಳವನ್ನು ಅರಿತುಕೊಂಡು ಸಂಘಟಿತರಾಗಬೇಕು, ಪಕ್ಷವನ್ನು ಮುನ್ನಡೆಸಬೇಕು ಎಂದರು.
ತಾಲ್ಲೂಕು ಅಧ್ಯಕ್ಷ ಸುರೇಂದ್ರಗೌಡ ಮಾತನಾಡಿ, ಪಂಡಿತ್ದೀನ ದಯಾಳ್ ಉಪಾಧ್ಯಾಯರಲ್ಲಿದ್ದಂತಹ ತುಡಿತ ಪ್ರತಿಯೊಬ್ಬ ಕಾರ್ಯಕರ್ತರಲ್ಲಿರಬೇಕು. ಪಕ್ಷದ ಸಂಘಟನೆಗಾಗಿ ಪ್ರತಿಯೊಬ್ಬ ಕಾರ್ಯಕರ್ತರು ದುಡಿಯಬೇಕು ಎಂದರು.
ಬಿಜೆಪಿ ಪಕ್ಷದ ರಮೇಶ್ಬಾಯಿರಿ, ಶ್ರೀರಾಮರೆಡ್ಡಿ, ಶ್ರೀಧರ್, ಸಿ.ವಿ.ಲೊಕೇಶ್ಗೌಡ, ನಂದೀಶ್, ಶಿವಕುಮಾರಗೌಡ, ಮಂಜುಳಮ್ಮ, ಸುಜಾತಮ್ಮ, ರತ್ನಮ್ಮ, ಶಿವಮ್ಮ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -