Home News ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ನಿರತನಾಗಿದ್ದೇನೆ – ಬಿ.ಎನ್.ರವಿಕುಮಾರ್

ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ನಿರತನಾಗಿದ್ದೇನೆ – ಬಿ.ಎನ್.ರವಿಕುಮಾರ್

0

ಜೆ ಡಿ ಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ ಆದೇಶದಂತೆ ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ನಿರತನಾಗಿದ್ದೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಭರವಸೆ ಸಹ ಅವರು ನೀಡಿದ್ದಾರೆ ಎಂದು ಜೆ ಡಿ ಎಸ್ ಮುಖಂಡ ಬಿ.ಎನ್.ರವಿಕುಮಾರ್ ತಿಳಿಸಿದರು.
ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳ ತುಮಕೂರಿನ ಶಾಲಾ ಮೈದಾನದಲ್ಲಿ ಆಯೋಜಿಸಿರುವ ಅಲ್ಪಸಂಖ್ಯಾತರ ಬೃಹತ್ ಸಮಾವೇಶಕ್ಕೆ ತಾಲ್ಲೂಕಿನ ತಾದೂರು ಗೇಟ್ ಬಳಿಯಿಂದ ತೆರಳಿದ ಮುವ್ವತ್ತು ಬಸ್ ಗಳಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸುಮಾರು ಒಂದೂವರೆ ಸಾವಿರಕ್ಕೂ ಅಧಿಕ ಮಂದಿ ಈ ದಿನ ಕ್ಷೇತ್ರದಿಂದ ಅಲ್ಪಸಂಖ್ಯಾತರ ಬೃಹತ್ ಸಮಾವೇಶಕ್ಕೆ ಹೊರಟಿದ್ದಾರೆ. ಎಲ್ಲೆಡೆ ಅಲ್ಪಸಂಖ್ಯಾತರ ಬೆಂಬಲ ಜೆ ಡಿ ಎಸ್ ಪಕ್ಷಕ್ಕೆ ಸಿಗುತ್ತಿದೆ. ನಮ್ಮ ಕ್ಷೇತ್ರದಲ್ಲೂ ಜೆ ಡಿ ಎಸ್ ಪಕ್ಷವನ್ನು ಬೆಂಬಲಿಸುವ ಅಲ್ಪಸಂಖ್ಯಾತರ ಆಶಯ ಮುಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಆಗಿದೆ. ಜನರ ಬೆಂಬಲ ಮತ್ತು ಒತ್ತಾಯದಿಂದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಂತೆ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದರು.

ಅಲ್ಪಸಂಖ್ಯಾತರ ಬೃಹತ್ ಸಮಾವೇಶಕ್ಕೆ ತಾಲ್ಲೂಕಿನ ತಾದೂರು ಗೇಟ್ ಬಳಿಯಿಂದ ತೆರಳಿದ ಮುವ್ವತ್ತು ಬಸ್ ಗಳಿಗೆ ಚಾಲನೆ ನೀಡಲಾಯಿತು

ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಿರುವ ಎರಡು ರಾಷ್ಟ್ರೀಯ ಪಕ್ಷಗಳ ವೈಫಲ್ಯ ಹಾಗೂ ಭ್ರಷ್ಟಾಚಾರಗಳನ್ನು ಜನತೆಯ ಮುಂದಿಡಲು ಹಾಗೂ ಪಕ್ಷದ ಬಲವರ್ಧನೆಗಾಗಿ ರಾಜ್ಯ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ರಾಜ್ಯಮಟ್ಟದ ಅಲ್ಪಸಂಖ್ಯಾತರ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು ಅದಕ್ಕಾಗಿ ಬೃಹತ್ ಸಂಖ್ಯೆಯಲ್ಲಿ ತೆರಳುತ್ತಿರುವುದಾಗಿ ನುಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಜೆ ಡಿ ಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಯುವ ಮುಖಂಡ ಬಿ.ಎನ್.ರವಿಕುಮಾರ್ ನೇತೃತ್ವದಲ್ಲಿ ಪಕ್ಷ ಬಲಗೊಳ್ಳುತ್ತಿದೆ. ಜಾತ್ಯತೀತ ಮನೋಭಾವನೆಯಿಂದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ನಮ್ಮ ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ರೈತರ, ಅಲ್ಪಸಂಖ್ಯಾತರ, ಹಿಂದುಳಿದ, ದಲಿತರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಕ್ಷೇತ್ರದಲ್ಲೂ ಮುಖಂಡರು ಕೆಲಸ ಮಾಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಮಾವೇಶಕ್ಕೆ ತೆರಳಿದ ಮುವ್ವತ್ತು ಬಸ್ ಗಳಿಗೆ ಮುಖಂಡರು ತಾದೂರು ಗೇಟ್ ಬಳಿ ಚಾಲನೆ ನೀಡಿದರು.
ಜೆ.ವಿ.ಎಸ್ ಮುಖಂಡರಾದ ಶಿವಾರೆಡ್ಡಿ, ರಾಜಶೇಖರ್, ತಾದೂರು ರಘು, ಕೆ.ಎಸ್.ಮಂಜುನಾಥ್, ಆರ್.ಎ.ಉಮೇಶ್, ವೆಂಕಟಸ್ವಾಮಿ, ಎಲ್.ಮಂಜುನಾಥ್, ಮುಗಿಲಡಿಪಿ ನಂಜಪ್ಪ, ಆದಿಲ್ ಪಾಷ, ಅಲಿ, ಷಫೀ, ಜಬೀವುಲ್ಲ, ಸಾದಿಕ್, ಚಾಂದ್ ಪಾಷ, ಸಿರಾಜ್, ಇನಾಯತ್, ಮೌಲಾ, ಜಬೀ, ನಯಾಜ್, ಸೊಹೇಲ್, ಅಮ್ಜದ್, ಕದಿರಿ ಯೂಸುಫ್, ಬಾಂಬ್ ಸೆಮಿ, ಎಂ.ಪಿ.ಮುಷ್ಟಾಕ್, ಫಾರುಕ್, ಮುನೀರ್, ಬಾಬು, ಹೈದರಾಲಿ, ಅಮೀರ್ ಜಾನ್, ಮುನವರ್, ಸಯ್ಯದ್ ಪಾಷ, ಫಯಾಜ್, ಬಾಂಬೆ ಇನಾಯತ್ ಹಾಜರಿದ್ದರು.

error: Content is protected !!