ಬುಳ್ಳಳ್ಳಿಯ ಸುನಿಲ್ ಅವರ ಮನೆಗೆ ಭಾನುವಾರ ಭೇಟಿ ನೀಡಿದ್ದ ಅವರು ತಾಲ್ಲೂಕಿನ ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.
ಸೋಲಿನಿಂದ ಪಾಠ ಕಲಿತಿರುವೆ. ಮುಂದಿನ ದಿನಗಳಲ್ಲಿ ನನ್ನ ತಾತ ಎಚ್.ಡಿ.ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷಸಂಘಟನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವೆ ಎಂದು ತಿಳಿಸಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಮೇಲೂರು ಬಿ.ಎನ್.ರವಿಕುಮಾರ್ ಅವರ ಜೊತೆಗೂಡಿ ಪ್ರವಾಸ ಕೈಗೊಳ್ಳುತ್ತೇನೆ. ಪಕ್ಷದ ಕಾರ್ಯಕರ್ತರು ದೃತಿಗೆಡಬಾರದು. ಒಂದು ಸೋಲು ಹಲವು ಜೀವನ ಪಾಠವನ್ನು ಕಲಿಸುತ್ತದೆ. ಕಾರ್ಯಕರ್ತರನ್ನು ಗಟ್ಟಿಗೊಳಿಸಲು, ಆತ್ಮಸ್ಥೈರ್ಯ ತುಂಬಲು ಹಾಗೂ ಪಕ್ಷವನ್ನು ಗಟ್ಟಿಗೊಳಿಸಲು ಖುದ್ದಾಗಿ ಎಲ್ಲೆಡೆ ಸಂಚರಿಸುತ್ತೇನೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರ್, ತಾದೂರು ರಘು, ಧರ್ಮೇಂದ್ರ, ಎಸ್.ಎಂ.ಎಸ್.ಶ್ರೀನಿವಾಸ್, ಮಳ್ಳೂರು ರಾಜೇಶ್, ಗಜೇಂದ್ರ ಹಾಜರಿದ್ದರು.