28.1 C
Sidlaghatta
Monday, February 16, 2026

ಪಕ್ಷಾತೀತವಾಗಿ ನೀರಾವರಿ ಹೋರಾಟದಲ್ಲಿ ಭಾಗಿಯಾಗಿ – ವಿ.ಮುನಿಯಪ್ಪ

- Advertisement -
- Advertisement -

ಬಯಲುಸೀಮೆ ಭಾಗಗಳಿಗೆ ಶಾಶ್ವತ ನೀರಾವರಿ ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು, ಅಕ್ಟೋಬರ್ ೨೯ರಂದು ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಬೃಹತ್ ಬೈಕ್ರ್ಯಾಲಿಯನ್ನು ಹಮ್ಮಿಕೊಂಡಿದ್ದು, ಪಕ್ಷಾತೀತವಾಗಿ ಎಲ್ಲಾ ನಾಗರಿಕರು ಭಾಗವಹಿಸಬೇಕು ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಮನವಿ ಮಾಡಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜನೆ ಮಾಡಿದ್ದ ಶಾಶ್ವತ ನೀರಾವರಿ ಹೋರಾಟಕ್ಕೆ ನಡೆಸಲು ಉದ್ದೇಶಿಸಿರುವ ಬೈಕ್ರ್ಯಾಲಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಚದಲಪುರ ಗೇಟ್ನಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಶಾಶ್ವತ ನೀರಾವರಿ ಹೋರಾಟಕ್ಕೆ ಬೆಂಬಲ ಸೂಚಿಸಿ, ಹೋರಾಟಗಾರರಲ್ಲಿ ಆತ್ಮಸ್ಥೈರ್ಯ ತುಂಬಿಸುವ ಅಗತ್ಯವಿದೆ. ತೀವ್ರವಾದ ನೀರಿನ ಅಭಾವ ಅನುಭವಿಸುತ್ತಿರುವ ಬಯಲುಸೀಮೆ ಭಾಗಗಳಲ್ಲಿನ ಜನರು, ಐಕ್ಯತೆಯಿಂದ ಹೋರಾಟದಲ್ಲಿ ಭಾಗವಹಿಸಬೇಕು. ಬಯಲು ಸೀಮೆ ಭಾಗಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಕೇಳುವುದು ನಮ್ಮ ಹಕ್ಕು. ಪ್ರತಿಯೊಬ್ಬ ನಾಗರಿಕರು ಮನೆಗೊಬ್ಬರಂತೆ ನೀರಾವರಿ ಹೋರಾಟದಲ್ಲಿ ಭಾಗವಹಿಸಬೇಕು ಎಂದರು.
ಬಯಲುಸೀಮೆ ಭಾಗಗಳಿಗೆ ನೀರಾವರಿ ಯೋಜನೆಗಳನ್ನು ಸಾಕಾರಗೊಳಿಸುವಂತೆ ಒತ್ತಾಯಿಸಲು ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವ ಯುವಜನತೆಯೂ ಕೂಡಾ ಬೆಂಬಲ ನೀಡುತ್ತಿದ್ದಾರೆ. ಬಯಲು ಸೀಮೆ ಭಾಗಗಳಿಂದ ಗುಳೆ ಹೋಗದಂತೆ ತಡೆಯುವ ಅಗತ್ಯವಿರುವುದರಿಂದ ಪ್ರತಿಯೊಬ್ಬ ನಾಗರಿಕರು ನೀರಾವರಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಸುಭ್ರಮಣಿ, ಆರ್.ಶ್ರೀನಿವಾಸ್, ಮುನಿಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಡಿ.ಎಸ್.ಎನ್.ರಾಜು, ಮುನಿಕೃಷ್ಣಪ್ಪ, ಬಿ.ಸಿ.ವೆಂಕಟೇಶ್, ದೊಡ್ಡಪಾಪಣ್ಣ, ಸುರೇಶ್, ಮೌಲಾ, ಜೆ.ಎಂ.ಬಾಲಕೃಷ್ಣ, ರಘು, ಚಿಕ್ಕಮುನಿಯಪ್ಪ, ಎಚ್.ಶಂಕರ್, ಮುತ್ತೂರು ಚಂದ್ರೇಗೌಡ, ವೆಂಕಟರಾಜೇಗೌಡ, ಮೂರ್ತಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!