ಪತ್ರಕರ್ತನ ಮೇಲೆ ದೂರು ದಾಖಲು

0
94

ವೈದ್ಯಕೀಯ ಪರಿವೀಕ್ಷಣೆಯಲ್ಲಿದ್ದ ವ್ಯಕ್ತಿಯನ್ನು ವೈದ್ಯಾಧಿಕಾರಿಗಳ ಅನುಮತಿ ಪಡೆಯದೇ ನಿರ್ಬಂಧಿತ ಪ್ರದೇಶಕ್ಕೆ ತೆರಳಿ ಸಂದರ್ಶಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರಪಡಿಸಿ ಗೌಪ್ಯತೆಗೆ ಭಂಗ ತಂದಿದ್ದಾರೆ ಎಂದು ಪತ್ರಿಕಾ ವರದಿಗಾರ ಕೋಟಹಳ್ಳಿಯ ಕೆ.ಎ.ಅನಿಲ್ ಕುಮಾರ್ ಅವರ ವಿರುದ್ಧ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಪೊಲೀಸರಿಗೆ ದೂರು ನೀಡಿದ್ದಾರೆ.

 ನ್ಯಾಯಾಲಯ ಹಾಗೂ ಸರ್ಕಾರಿ ಆದೇಶದ ಉಲ್ಲಂಘನೆ ಮಾಡಿರುವುದಲ್ಲದೆ, ಕೆ.ಎ.ಅನಿಲ್ ಕುಮಾರ್ ಅವರ ನಿರ್ಲಕ್ಷ್ಯದ ಕಾರಣದಿಂದ ಸಮುದಾಯಕ್ಕೆ ಕೊರೊನಾ ಸೋಂಕು ಹರಡುವ ಸಂಭವವಿರುತ್ತದೆ. ನಿಯಮಾನುಸಾರ ಇವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಕೋರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.