13.1 C
Sidlaghatta
Saturday, December 20, 2025

ಪದ್ಮಶಾಲಿ ಸಮಾಜದ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

- Advertisement -
- Advertisement -

ನಗರದ ಕಾಳಿಕಾಂಬ ಕಮಠೇಶ್ವರಸ್ವಾಮಿ ದೇವಾಲಯದ ಸಮುದಾಯಭವನದಲ್ಲಿ ಭಾನುವಾರ ಜಿಲ್ಲಾ ಪದ್ಮಶಾಲಿ ನೌಕರರ ಸ್ವಯಂ ಸೇವಾ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ವ್ಯಾಪ್ತಿಯ ಪದ್ಮಶಾಲಿ ಸಮಾಜದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಜಿಲ್ಲಾ ಪದ್ಮಶಾಲಿ ನೌಕರರ ಸ್ವಯಂ ಸೇವಾ ಬಳಗದ ಅಧ್ಯಕ್ಷ ಎಂ.ಶ್ರೀನಿವಾಸಮೂರ್ತಿ ಮಾತನಾಡಿದರು.
ಸಾಧನೆ ಸಾಧಕನ ಸೊತ್ತು. ನಿರಂತದ ಕ್ರಿಯಾಶಿಲತೆ, ಆತ್ಮಾಭಿಮಾನ ಹಾಗೂ ದೃಢ ಸಂಕಲ್ಪದ ಕಾರ್ಯಗಳಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಅವರು ತಿಳಿಸಿದರು.
ಪದ್ಮಶಾಲಿ ಸಮಾಜದಿಂದ ಹನ್ನೊಂದು ವರ್ಷದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದೇವೆ. ಪದ್ಮಶಾಲಿ ಸಮಾಜದ ಜನರು ಬಹಳ ಹಿಂದೆ ಉಳಿದಿದ್ದು, ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಇಂದಿನ ಸಮಾಜದಲ್ಲಿ ವಿದ್ಯೆ ಬಹಳ ಮುಖ್ಯವಾಗಿದ್ದು, ಎಲ್ಲರೂ ಕಷ್ಟಪಟ್ಟು ಓದಿ. ಮಕ್ಕಳು ಇನ್ನು ಮುಂದೆ ಚೆನ್ನಾಗಿ ಓದಿ ಹೆಚ್ಚು ಅಂಕಗಳನ್ನು ಪಡೆದು ಶಾಲೆಗೆ, ತಂದೆ ತಾಯಿಗಳಿಗೆ ಕೀರ್ತಿ ತನ್ನಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಒಟ್ಟು ೧೮ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ಶಿಕ್ಷಣ ಇಲಾಖೆಯ ಪರಿವೀಕ್ಷಕ ಸಿ.ಕೃಷ್ಣಮೂರ್ತಿ ಹಾಗೂ ಪ್ರತಿಭಾ ಪುರಸ್ಕಾರದಲ್ಲಿ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ಪ್ರಾಯೋಜಿಸಿದ್ದ ನಿವೃತ್ತ ಕೆ.ಇ.ಬಿ ಅಧಿಕಾರಿ ಎಂ.ಆರ್.ಹನುಮಂತಯ್ಯ ದಂಪತಿಯನ್ನು ಸನ್ಮಾನಿಸಲಾಯಿತು.
ನಗರಸಭಾ ಸದಸ್ಯ ಎಲ್.ಅನಿಲ್ ಕುಮಾರ್, ತಾಲ್ಲೂಕು ಪದ್ಮಶಾಲಿ ಸಂಘದ ಅಧ್ಯಕ್ಷ ಎಸ್.ಕೆ.ನಾಗರಾಜ್, ನಿವೃತ್ತ ಪ್ರಾಂಶುಪಾಲ ರಾಮಚಂದ್ರಪ್ಪ, ಅಭಿಯೋಜನಾಧಿಕಾರಿ ಸುಧಾ, ಟಿ.ಎಸ್.ಶ್ರೀನಿವಾಸಮೂರ್ತಿ, ಅನ್ನಪೂರ್ಣಮ್ಮ, ಅಮರನಾಥ, ರೆಡ್ಡಿ ರಮೇಶ್, ಶ್ರೀನಿವಾಸ್, ಗೋಪಾಲಕೃಷ್ಣ, ನಾಗರಾಜ್, ವೆಂಕಟಾಚಲಪತಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!