ಪದ್ಮಶಾಲಿ ಸಮಾಜದ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

- Advertisement -
- Advertisement -

ನಗರದ ಉಲ್ಲೂರುಪೇಟೆ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಜಿಲ್ಲಾ ವ್ಯಾಪ್ತಿಯ ಪದ್ಮಶಾಲಿ ಸಮಾಜದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ ೭೦ ಕ್ಕಿಂತಲೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ರಾಮಚಂದ್ರ ಮಾತನಾಡಿದರು.
ಸಾಧನೆ ಸಾಧಕನ ಸೊತ್ತು. ನಿರಂತದ ಕ್ರಿಯಾಶಿಲತೆ, ಆತ್ಮಾಭಿಮಾನ ಹಾಗೂ ದೃಢ ಸಂಕಲ್ಪದ ಕಾರ್ಯಗಳಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಅವರು ತಿಳಿಸಿದರು.
ಪದ್ಮಶಾಲಿ ಸಮಾಜದಿಂದ ಹತ್ತು ವರ್ಷದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದೇವೆ. ಪದ್ಮಶಾಲಿ ಸಮಾಜದ ಜನರು ಬಹಳ ಹಿಂದೆ ಉಳಿದಿದ್ದು, ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದರು.
ಇಂದಿನ ಸಮಾಜ ವಿದ್ಯೆ ಬಹಳ ಮುಖ್ಯವಾಗಿದ್ದು, ಎಲ್ಲರೂ ಕಷ್ಟಪಟ್ಟು ಓದಿ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಚಿಂತಾಮಣಿ ತಾಲ್ಲೂಕಿನ ವಿದ್ಯಾರ್ಥಿಗಳು ಮೇಲುಗೈ ಸಾದಿಸಿದ್ದು, ಶಿಡ್ಲಘಟ್ಟ ತಾಲ್ಲೂಕಿನ ಮಕ್ಕಳು ಇನ್ನು ಮುಂದೆ ಚೆನ್ನಾಗಿ ಓದಿ ಹೆಚ್ಚು ಅಂಕಗಳನ್ನು ಪಡೆದು ಶಾಲೆಗೆ, ತಂದೆ ತಾಯಿಗಳಿಗೆ ಕೀರ್ತಿ ತನ್ನಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಟ್ಟು ೩೬ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು.
ಪದ್ಮಶಾಲಿ ಸಮಾಜದ ಮುಖಂಡರಾದ ನಾಗರಾಜ್, ಕೇಶವ, ಅನ್ನಪೂರ್ಣಮ್ಮ, ಶ್ರೀನಿವಾಸ್ ಮೂರ್ತಿ, ಹನುಮಂತಯ್ಯ, ರಘು ಶೇಷಾದ್ರಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!