ಪೂಜಮ್ಮ ದೇವಿ ಹೂವಿನ ಕರಗ

- Advertisement -
- Advertisement -

ನಗರದ ಹಳೆಯ ರೇಷ್ಮೆಗೂಡು ಮಾರುಕಟ್ಟೆ ಹಿಂಭಾಗದಲ್ಲಿ ನೆಲೆಸಿರುವ ಪೂಜಮ್ಮ ದೇವಿ ಹೂವಿನ ಕರಗ ಮಹೋತ್ಸವ ಮಂಗಳವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.
ಕರಗದ ಪ್ರಯುಕ್ತ ವಿಶೇಷ ವಾದ್ಯಗೋಷ್ಠಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ದೀಪಾಲಂಕಾರಗಳ ಪೂಜಮ್ಮ ದೇವಿಯ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಿತು. ಕದಿರಿಹುಣ್ಣಿಯಂದು ಪ್ರತಿವರ್ಷವೂ ನಗರದ ಪೂಜಮ್ಮ ದೇವಿಯ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಕರಗವನ್ನು ನಡೆಸಲಾಗುತ್ತದೆ.
ಆಕರ್ಷಕ ತಮಟೆ ವಾದ್ಯ ಗಮನ ಸೆಳೆಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿತು. ಮನೆಗಳ ಮುಂದೆ ರಂಗೋಲಿ ಹಾಕಲಾಗಿತ್ತು. ಪ್ರತಿ ಮನೆಯವರು ಕರಗಕ್ಕೆ ಪೂಜೆ ಸಲ್ಲಿಸಿ ಹೂವನ್ನು ಅರ್ಪಿಸಿದರು. ಕೋಟೆ ವೃತ್ತ ಹಾಗೂ ಓ.ಟಿ ವೃತ್ತದ ಬಳಿ ವಾದ್ಯಗೋಷ್ಠಿಗಳನ್ನು ಏರ್ಪಡಿಸಲಾಗಿತ್ತು. ಚಲನಚಿತ್ರ ನಟ ಲೂಸ್ ಮಾದ, ನಿರ್ದೇಶಕ ಚಂದ್ರು, ಸಂಸದ ಕೆ.ಎಚ್.ಮುನಿಯಪ್ಪ, ಕೆ.ಪಿ.ಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ, ಶಾಸಕ ಎಂ.ರಾಜಣ್ಣ, ಕರವೇ ತಾಲ್ಲೂಕು ಅಧ್ಯಕ್ಷ ವೆಂಕಟರೋಣಪ್ಪ, ನಗರಸಭಾ ಸದಸ್ಯರಾದ ಲಕ್ಷ್ಮಣ, ನಂದಕಿಶನ್, ಚಿಕ್ಕಮುನಿಯಪ್ಪ, ಮುಖಂಡರಾದ ನಾಗನರಸಿಂಹ, ಮುನಿನರಸಿಂಹ, ರವಿ ಮತ್ತಿತರರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!