ಪಟ್ಟಣದ ಸರಸ್ವತಿ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಗುರುವಾರ ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಹಾಗೂ ಇನ್ನಿತರ ಉಪಯುಕ್ತ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಪುರಠಾಣೆಯ ಸಬ್ ಇನ್ಸ್ಪೆಕ್ಟರ್ ಪುರುಷೋತ್ತಮ್ ಹಾಗೂ ಸಿಬ್ಬಂದಿ ವರ್ಗದವರು ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಂಶಯಗಳನ್ನು ಪರಿಹರಿಸುತ್ತಾ ಒಳ್ಳೆಯ ಪ್ರಶ್ನೆಗಳನ್ನು ಕೇಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಪೂರ್ವಕವಾಗಿ ಬಹುಮಾನರೂಪದಲ್ಲಿ ಕಲಿಕಾಸಾಮಗ್ರಿಗಳನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎನ್. ಶ್ರೀಕಾಂತ್, ಮುಖ್ಯಶಿಕ್ಷಕಿ ವಿ. ಸೀತಾಲಕ್ಷ್ಮಿ, ಶಿಕ್ಷಕರಾದ ದಾಶರಥಿ, ನಾರಾಯಣಸ್ವಾಮಿ, ವೆಂಕಟೇಶಪ್ಪ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
- Advertisement -
- Advertisement -
- Advertisement -
- Advertisement -