ಪೊಲೀಸರ ಮೇಲೆ ಹಲ್ಲೆ ಮಾಡಲು ಬಂದವನ ಬಂಧನ
ಶಿಡ್ಲಘಟ್ಟ ಗ್ರಾಮಾಂತರ ಠಾಣಾ ಸಿಬಂದಿ ನಂದಕುಮಾರ್ ಮತ್ತು ಎಚ್.ಸಿ. ಹರೀಶ್ ಹೆಚ್ ಅವರು ಸೋಮವಾರ ವೈ.ಹಯಣಸೇನಹಳ್ಳಿ ಗ್ರಾಮದ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿಸಿದಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಲು ಮುಂದಾದ ಶೀಗೇಹಳ್ಳಿಯ ಗೋಪಿನಾಥ್ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದೆ.
ಆಶಾ ಕಾರ್ಯಕರ್ತೆಯನ್ನು ನಿಂದಿಸಿದವರ ಮೇಲೆ ದೂರು ದಾಖಲು
ತಾಲ್ಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿಯ ಬಾಳೇಗೌಡನಹಳ್ಳಿ ಗ್ರಾಮದಲ್ಲಿ ಕೊರೊನದ ಬಗ್ಗೆ ಜಾಗೃತಿ ಹಾಗೂ ಮಾಹಿತಿ ನೀಡಲು ಹೋಗಿದ್ದ ಆಶಾಕಾರ್ಯಕರ್ತ ಕಲಾವತಿ ಅವರಿಗೆ ಇಂದ್ರಜಿತ್ ನಾಯಕ್ ಎಂಬ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಶಾಕಾರ್ಯಕರ್ತೆಯರ ಸಂಘದ ಸದಸ್ಯರು ಗಂಜಿಗುಂಟೆ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ನಿಂದಿಸಿರುವ ವ್ಯಕ್ತಿಯ ಮೇಲೆ ಕ್ರಮ ಕೈಗೊಂಡು ಆಶಾಕಾರ್ಯಕರ್ತರಿಗೆ ರಕ್ಷಣೆ ಒದಗಿಸಬೇಕೆಂದು ಮಂಗಳವಾರ ಪ್ರತಿಭಟನೆ ನಡೆಸಿದ್ದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಅವರು ಬಂದು ಮಾಹಿತಿ ಪಡೆದು ಆಶಾ ಕಾರ್ಯಕರ್ತೆಯರೊಂದಿಗೆ ತೆರಳಿ ದಿಬ್ಬೂರಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದರು. ಪಿ.ಎಸ್.ಐ. ರಂಜನ್ ಕುಮಾರ್ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
- Advertisement -
- Advertisement -
- Advertisement -







