23.1 C
Sidlaghatta
Friday, March 29, 2024

ಪೊಲೀಸರ ವಿರುದ್ಧ ಚೀಮನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

- Advertisement -
- Advertisement -

ದಸರಾ ಆಚರಣೆಗಾಗಿ ಅಂಗಡಿಯನ್ನು ಸ್ವಚ್ಛ ಮಾಡುವ ವೇಳೆಯಲ್ಲಿ ಪುರಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯ್ ಅವರು ಏಕಾಏಕಿ ಅಂಗಡಿ ಮಾಲೀಕರ ಮೇಲೆ ಹಲ್ಲೆ ನಡೆಸಿ, ದುರ್ವತನೆಯಿಂದ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಚೀಮನಹಳ್ಳಿ ಗ್ರಾಮಸ್ಥರು ಬುಧವಾರ ನಗರಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ನಗರದ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯ್ ಅವರು ಮಂಗಳವಾರ ರಾತ್ರಿಯಲ್ಲಿ ದಿಬ್ಬೂರಹಳ್ಳಿ ರಸ್ತೆಯಲ್ಲಿ ಸಂಚಾರ ಮಾಡುವಾಗ ಅಂಗಡಿಯನ್ನು ಸ್ವಚ್ಛ ಮಾಡಿಕೊಳ್ಳುತ್ತಿದ್ದಾಗ ಬಂದು ಅಂಗಡಿಯ ಬಾಗಿಲನ್ನು ಮುಚ್ಚುವಂತೆ ಹೇಳಿದರು, ಅಂಗಡಿಯನ್ನು ಸ್ವಚ್ಛ ಮಾಡುತ್ತಿದ್ದೇನೆ ಎಂದು ಹೇಳಿದರೂ ಕೂಡಾ ಕೇಳದೆ ಏಕಾಏಕಿ ಹಲ್ಲೆ ನಡೆಸಿ, ಅಂಗಡಿಯ ಗಾಜುಗಳನ್ನು ಹೊಡೆದುಹಾಕಿದ್ದಾರೆ, ರೌಡಿಯಂತೆ ವರ್ತನೆ ಮಾಡುತ್ತಾರೆ, ಸಾರ್ವಜನಿಕರನ್ನು ಅವಾಚ್ಯ ಶಬ್ದಗಳಿಂದ ಮಾತನಾಡುತ್ತಾರೆ ಅವರ ವರ್ತನೆ ಸರಿಯಿಲ್ಲವೆಂದು ಆರೋಪಿಸಿ ಮುತ್ತಿಗೆ ಹಾಕಿ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಚೀಮನಹಳ್ಳಿ ಗ್ರಾಮದ ಮುಖಂಡರನ್ನು ಸಮಾಧಾನಪಡಿಸಿದ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸಮೂರ್ತಿ, ಮಂಗಳವಾರದಂದು ನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದವರಿಂದ ಪಥಸಂಚಲನವಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಭದ್ರತೆಯನ್ನು ಒದಗಿಸಲಾಗಿತ್ತು, ಆದರೆ ರಾತ್ರಿಯಲ್ಲಿ ಆಚಾತುರ್ಯವಾಗಿ ಈ ಘಟನೆ ನಡೆದಿದೆ. ಮುಂದೆ ಇಂತಹ ಅನಾಹುತಗಳು ಆಗದಂತೆ ಜಾಗ್ರತೆವಹಿಸುವುದಾಗಿ ಸಮಾಧಾನಪಡಿಸಿ ವಾಪಸ್ಸು ಕಳುಹಿಸಿದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!