26.1 C
Sidlaghatta
Tuesday, December 9, 2025

ಪೌಷ್ಠಿಕ ಆಹಾರ ಸೇವಿಸಿ ಆರೋಗ್ಯ ವೃದ್ಧಿಸಿಕೊಳ್ಳಿ

- Advertisement -
- Advertisement -

ಗರ್ಭಿಣಿ, ಬಾಣಂತಿಯರು ಹಾಗೂ ಕಿಶೋರಿಯರಿಗೆ ಪೌಷ್ಠಿಕಾಂಶ ಅಗತ್ಯವಿರುವುದರಿಂದ ಆಹಾರದಲ್ಲಿ ಸಮತೋಲನ ಇರಬೇಕು. ಇಂದು ಬಹುತೇಕರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದಕ್ಕೆ ಪೌಷ್ಠಿಕ ಆಹಾರ ಸೇವಿಸದಿರುವುದೇ ಕಾರಣ ಎಂದು ಜಂಗಮಕೋಟೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಂಬಿಕಾ ತಿಳಿಸಿದರು.
ತಾಲ್ಲೂಕಿನ ನಾಗಮಂಗಲ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಶುಚಿತ್ವ ಮತ್ತು ಸಮತೋಲನವಾದ ಆಹಾರದ ಕುರಿತಂತೆ ಅವರು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿದರು.
ದಿನನಿತ್ಯದ ನಮ್ಮ ಆಹಾರದಲ್ಲಿ ಮೊಳಕೆ ಕಾಳು, ಹಸಿ ತರಕಾರಿ, ಸೊಪ್ಪು ಬಳಕೆ ಮಾಡಬೇಕು. ಆರೋಗ್ಯವಂತರಾಗಿರಲು ಹಣ್ಣು, ಹಾಲು, ಮೊಟ್ಟೆಗಳನ್ನು ಉಪಯೋಗಿಸಬೇಕು. ಜೊತೆಗೆ ಶುದ್ಧವಾದ ಕುಡಿಯುವ ನೀರಿನ ಕಡೆಗೂ ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ವಿವಿಧ ರೀತಿಯ ಕಾಳುಗಳು, ಸೊಪ್ಪು, ತರಕಾರಿಗಳ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಗಿತ್ತು.
ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪ ಶಿವಕುಮಾರ್, ಅಂಗನವಾಡಿ ಕಾರ್ಯಕರ್ತೆಯರಾದ ಭವ್ಯ, ಕನಕರತ್ನಮ್ಮ, ಆಸ್ಪತ್ರೆಯ ದಾದಿ ನಕ್ಷತ್ರ ಮೇರಿ, ಆಶಾ ಕಾರ್ಯಕರ್ತೆಯರಾದ ಸುಶೀಲಾ, ಪ್ರಭಾವತಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!