ನಗರದ ಕುರುಬರಪೇಟೆ ವಾಸಿ ಡಿ.ಆರ್.ನರಸಿಂಹರಾಜು ಅವರ ಪುತ್ರಿ ಎನ್.ಲಕ್ಷ್ಮೀಯಾದವ್ ಅವರ ಸಂಗೀತ, ಸಾಹಿತ್ಯ ಮತ್ತು ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಈಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಾದವ ಕಲ್ಚರಲ್ ಫೌಂಡೇಷನ್ ಟ್ರಸ್ಟ್ ವತಿಯಿಂದ ‘ಪ್ರತಿಭಾ ಪುರಸ್ಕಾರ’ ಮಾಡಿ ಗೌರವಿಸಲಾಯಿತು.
ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಎನ್.ಲಕ್ಷ್ಮೀಯಾದವ್ ತನ್ನ ಹತ್ತನೇ ವಯಸ್ಸಿನಲ್ಲೇ ಸಂಗೀತ ಜ್ಯೂನಿಯರ್ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಸಂಗೀತದೊಡನೆ ಚಿತ್ರಕಲೆ, ಹಿಂದಿ ರತ್ನ, ಕಂಪ್ಯೂಟರ್ ಶಿಕ್ಷಣ ಪಡೆದು ಜಿಲ್ಲಾಡಳಿತದಿಂದ ಅಸಾಧಾರಣ ಬಾಲ ಪ್ರತಿಭೆ ಪುರಸ್ಕಾರ ಪಡೆದಿದ್ದರು. ರಾಜ್ಯಮಟ್ಟದ ಗಾಯನ ಸ್ಪರ್ಧೆಯಲ್ಲಿ ಹಲವು ಬಹುಮಾನ ಪಡೆದು, ಆಂಧ್ರದ ತಿರುಪತಿ ತಿರುಮಲ ವೆಂಕಟೇಶ್ವರಸ್ವಾಮಿ ಸನ್ನಿಧಿಯಲ್ಲಿ ಸಂಗೀತ ಕಚೇರಿಯನ್ನು ನಡೆಸಿಕೊಟ್ಟಿದ್ದಾರೆ. ಹಲವು ಪತ್ರಿಕೆಗಳಲ್ಲಿ ಕಥೆ, ಕವನ, ಲೇಖನಗಳನ್ನು ಬರೆಯುತ್ತಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸಿದ ಕಲಾ ಪ್ರತಿಭೋತ್ಸವದಲ್ಲೂ ಪ್ರಶಸ್ತಿ ಪಡೆದಿದ್ದಾರೆ.
ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳ ಸಾಧನೆಗಾಗಿ ನೀಡಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಕೃಷ್ಣಯಾದವಾನಂದ ಸ್ವಾಮಿಗಳು, ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್, ಯಾದವ ಕಲ್ಚರಲ್ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ದೇವರಾಜ್ ಹಾಜರಿದ್ದರು.
- Advertisement -
- Advertisement -
- Advertisement -