20.1 C
Sidlaghatta
Saturday, October 25, 2025

ಪ್ರತಿ ಮಂಗಳವಾರ ಹೋಬಳಿ ಮಟ್ಟದಲ್ಲಿ ಬಿ.ಜೆ.ಪಿ ಪಕ್ಷದ ಸ್ವಚ್ಛತಾ ಅಭಿಯಾನ

- Advertisement -
- Advertisement -

ಪ್ರತಿ ಮಂಗಳವಾರ ಪಟ್ಟಣ ಹಾಗೂ ಹೋಬಳಿ ಮಟ್ಟದಲ್ಲಿ ಬಿ.ಜೆ.ಪಿ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತೇವೆ ಎಂದು ಬಿ.ಜೆ.ಪಿ ತಾಲ್ಲೂಕು ಅಧ್ಯಕ್ಷ ಸುರೇಂದ್ರಗೌಡ ತಿಳಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಬಿ.ಜೆ.ಪಿ ಪಕ್ಷದ ಸದಸ್ಯರೊಡಗೂಡಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ಬಿ.ಜೆ.ಪಿ ಸದಸ್ಯತ್ವದ ಆಂದೋಲನವನ್ನು ತಾಲ್ಲೂಕಿನಲ್ಲಿ ಪ್ರಾರಂಭಿಸಿದ್ದೇವೆ. ಕೇಂದ್ರ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಸಾಕಷ್ಟು ಕಡಿಮೆ ಮಾಡಿದೆ. ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ಈಗಾಗಲೇ 4 ಕೋಟಿ ರೂ ಉಳಿತಾಯವಾಗುತ್ತಿದೆ. ರಾಜ್ಯ ಸರ್ಕಾರ ಬಸ್ ದರ ಇನ್ನೂ ಇಳಿಸಿಲ್ಲ. ಇದು ಖಂಡನೀಯ. ಜನರಿಗೆ ಅನುಕೂಲ ಆಗುವ ಕಾರ್ಯಯೋಜನೆಗಳನ್ನು ಸರ್ಕಾರ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಸರ್ಕಾರಿ ಆಸ್ಪತ್ರೆಯು ತಾಲ್ಲೂಕಿನಾದ್ಯಂತ ಬರುವ ರೋಗಿಗಳನ್ನು ಗುಣಪಡಿಸುವ ತಾಣವಾಗಿದ್ದು, ಈ ಸ್ಥಳದಲ್ಲಿ ಸ್ವಚ್ಛತೆಯು ಅತಿಮುಖ್ಯವಾದದ್ದು. ಅದಕ್ಕಾಗಿ ಬಿ.ಜೆ.ಪಿ ಪಕ್ಷದ ವತಿಯಿಂದ ಸ್ವಚ್ಛತೆ ಕಾರ್ಯಕ್ರಮವನ್ನು ಸರ್ಕಾರಿ ಆಸ್ಪತ್ರೆಯಿಂದ ಪ್ರಾರಂಭಿಸುತ್ತಿರುವುದಾಗಿ ತಿಳಿಸಿದರು.
ಬಿ.ಜೆ.ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಯಿರಿ, ಶ್ರೀಧರ್, ರಾಘವೇಂದ್ರ, ದಾಮೋದರ್, ತ್ಯಾಗರಾಜ್, ನಂದೀಶ್, ಶಿವಕುಮಾರಗೌಡ, ಸುಜಾತಮ್ಮ, ಮುನಿರತ್ನಮ್ಮ, ಶಿವಮ್ಮ, ಪ್ರಕಾಶ್, ಅಶ್ವಥ್, ನರೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!