27.1 C
Sidlaghatta
Friday, March 29, 2024

ಪ್ರತಿ ಲೀಟರ್ ಹಾಲಿಗೆ ಕನಿಷ್ಟ 25 ರೂಪಾಯಿಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ

- Advertisement -
- Advertisement -

ಮಳೆಯ ಅಭಾವದಿಂದ ಹಾಲು ಉತ್ಪಾದನೆ ಕುಂಠಿತಗೊಂಡಿದೆ. ಆದ್ದರಿಂದ ರೈತರು ನಷ್ಟ ಹೊಂದುವುದನ್ನು ತಡೆಯಲು ಪ್ರತಿ ಲೀಟರ್ ಹಾಲಿಗೆ ಕನಿಷ್ಟ ೨೫ ರೂಪಾಯಿಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತದೆ ಎಂದು ಕೋಚಿಮುಲ್ ನಿರ್ದೇಶಕ ಬಂಕ್‌ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಬೆಳ್ಳೂಟಿ ಗೇಟ್‌ನಲ್ಲಿರುವ ಗುಟ್ಟಾಂಜನೇಯಸ್ವಾಮಿ ಕಲ್ಯಾಣಮಂಟಪದಲ್ಲಿ ಮಂಗಳವಾರ ಹಾಲು ಒಕ್ಕೂಟದ ವತಿಯಿಂದ ಆಯೋಜನೆ ಮಾಡಲಾಗಿದ್ದ, ಅತ್ತಿಗಾನಹಳ್ಳಿ ಗ್ರಾಮದ ಡೈರಿ ಕಾರ್ಯದರ್ಶಿ ಕೃಷ್ಣಪ್ಪ ಅವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಾಲು ಬಾಯಿ ಜ್ವರದಿಂದ ಮೃತಪಟ್ಟಿದ್ದ ರಾಸುಗಳ ೧೫೮ ಮಂದಿ ಮಾಲೀಕರಿಗೆ ತಲಾ ೬,೦೦೦ ರೂಪಾಯಿಗಳಂತೆ ೯ ಲಕ್ಷ ೧೨.ಸಾವಿರ ರೂಪಾಯಿಗಳು, ಹಾಗೂ ದತ್ತಿ ವತಿಯಿಂದ ೨೬ ಮಂದಿ ಫಲಾನುಭವಿಗಳಿಗೆ ೫,೦೦೦ ರೂಪಾಯಿಗಳಂತೆ ೧ ಲಕ್ಷ ೩೦ ಸಾವಿರ ರೂಪಾಯಿಗಳ ಚೆಕ್ಕುಗಳನ್ನು ವಿತರಣೆ ಮಾಡಿ, ಕೃಷ್ಣಪ್ಪನ ಕುಟುಂಬಕ್ಕೆ ಸಹಾಯಧನ ನೀಡಿ ಅವರು ಮಾತನಾಡಿದರು.
ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ ಬಂಕ್ ಮುನಿಯಪ್ಪ, ತಾಲ್ಲೂಕಿನ ಸುಮಾರು ೧೯೦ ಸಹಕಾರ ಸಂಘಗಳಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಕಾರ್ಯದರ್ಶಿಗಳ ಕುಟುಂಬಗಳಿಗೆ ನೆರವಾಗಲು, ಈಗಾಗಲೇ ಕೋಲಾರದ ಒಕ್ಕೂಟದ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಕಾರ್ಯದರ್ಶಿಗಳು ಅಕಾಲ ಮರಣಕ್ಕೆ ತುತ್ತಾದರೆ, ೧ ಲಕ್ಷ ರೂಪಾಯಿಗಳ ಸಹಾಯಧನವನ್ನು ನೀಡಲು ಉದ್ದೇಶಿಸಲಾಗಿದೆ, ಎಸ್.ಎಸ್.ಎಲ್.ಸಿ.,ಪಿ.ಯು.ಸಿ ಮತ್ತು ಪದವಿ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವಂತಹ ಕಾರ್ಯದರ್ಶಿಗಳ ಮಕ್ಕಳಿಗೆ ಪ್ರೋತ್ಸಾಹ ಮಾಡುವಂತಹ ಯೋಜನೆಗಳನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಈಗ ತೀವ್ರ ಮಳೆಯ ಕೊರತೆಯಿಂದಾಗಿ ಹಾಲು ಉತ್ಪಾದಕರಿಗೆ ನಷ್ಟವುಂಟಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿ ಲೀಟರ್ ಹಾಲಿಗೆ ೨೫ ರೂಪಾಯಿಗಳು ನೀಡಲು ಸಭೆಯಲ್ಲಿ ತೀರ್ಮಾನ ಮಾಡಿ ಠರಾವು ಹೊರಡಿಸಲಾಗುತ್ತಿದೆ. ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತದೆ. ಕಾರ್ಯದರ್ಶಿಗಳು ಪ್ರಾಮಾಣಿಕರಾಗಿ ಕೆಲಸ ಮಾಡಬೇಕು ಎಂದರು.
ಶಿಡ್ಲಘಟ್ಟ ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ.ಕೆ.ಜಿ.ಈಶ್ವರಯ್ಯ ಮಾತನಾಡಿ, ರೈತರು ರಾಸುಗಳಿಗೆ ವಿಮೆಗಳನ್ನು ಮಾಡಿಸಿಕೊಳ್ಳಬೇಕು, ಈಗಾಗಲೇ ಈ ಸಾಲಿನಲ್ಲಿ ೬೦೦೦ ರಾಸುಗಳಿಗೆ ವಿಮೆ ಮಾಡಿಸಲಾಗಿದೆ, ರೈತರು ೪೦೦ ರೂಪಾಯಿಗಳು ಪಾವತಿಸಬೇಕು, ಒಕ್ಕೂಟ ೪೦೦ ರೂಪಾಯಿಗಳನ್ನು ಭರಿಸುತ್ತದೆ, ಇದರಿಂದ ರಾಸುಗಳು ಮರಣಹೊಂದಿದಾಗ ರೈತರಿಗೆ ಅನುಕೂಲವಾಗಲಿದೆ. ಕಾರ್ಯದರ್ಶಿಗಳು ಹೆಚ್ಚು ಆಸಕ್ತಿ ವಹಿಸಿ ರಾಸುಗಳಿಗೆ ವಿಮಾ ಸೌಲಭ್ಯಗಳನ್ನು ಮಾಡಿಸಿಕೊಡಲು ಸಹಕಾರಿಗಳಾಗಬೇಕು ಎಂದರು.
ಇದೇ ಸಂಧರ್ಭದಲ್ಲಿ ಮೃತ ಕೃಷ್ಣಪ್ಪ ಅವರ ಕುಟುಂಬಕ್ಕೆ ಸಹಾಯಧನ ಹಾಗೂ ಕಾಯಿಬಾಯಿ ರೋಗದಿಂದ ಸಾವನ್ನಪ್ಪಿರುವ ರಾಸುಗಳ ಮಾಲೀಕರಿಗೆ ಚೆಕ್ಕುಗಳನ್ನು ವಿತರಣೆ ಮಾಡಲಾಯಿತು. ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಗೋಪಾಲರಾವ್, ಚಂದ್ರಶೇಖರ್, ಆಂಜಿನಪ್ಪ, ಕುಮ್ಮಯ್ಯ, ಕೆ.ಬಿ.ಎನ್.ರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!