‘ಹೊಗೆರಹಿತ ಗ್ರಾಮ ಮತ್ತು ನಗರ’ದ ಕನಸಿನೊಂದಿಗೆ ಕೇಂದ್ರ ಸರ್ಕಾರ ಆರಂಭಿಸಿರುವ ‘ಪ್ರಧಾನಮಂತ್ರಿ ಉಜ್ವಲ ಯೋಜನೆ’ಯಡಿ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೫೦ ಅರ್ಜಿಗಳು ಬಂದಿದ್ದು ಇದೀಗ ೮ ಮಂದಿ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯತಿ ಆವರಣದಲ್ಲಿ ಸೋಮವಾರ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ, ಸ್ಟೌ, ರೆಗ್ಯುಲೇಟರ್ ವಿತರಿಸಿ ಶ್ರೀ ವೆಂಕಟೇಶ್ವರ ಇಂಡೇನ್ ಗ್ಯಾಸ್ ವ್ಯವಸ್ಥಾಪಕ ಪ್ರಕಾಶ್ ಮಾತನಾಡಿದರು.
ಪರಿಸರ ಉಳಿಸುವುದಲ್ಲದೆ ಆರೋಗ್ಯದ ಸುರಕ್ಷತೆಗೂ ಬಹು ಅನುಕೂಲಕರವಾದ ಉಜ್ವಲ ಯೋಜನೆಯ ಸದುಪಯೋಗವನ್ನು ಪರಿಶಿಷ್ಠ ಜಾತಿ ಹಾಗು ಪಂಗಡದ ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಕುಟುಂಬದವರು ಪಡೆದುಕೊಳ್ಳಬೇಕು ಎಂದರು.
ಮಹಿಳೆಯರು ಸೌದೆ ಬಳಸಿಅಡುಗೆ ಮಾಡುವ ಪದ್ದತಿಗೆ ಮಂಗಳ ಹಾಡಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಉಜ್ವಲಯೋಜನೆಯಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ. ‘ಉಜ್ವಲ’ ಯೋಜನೆಯಡಿ ಗ್ಯಾಸ್ ಸಂಪರ್ಕ ಹೊಂದಿರದೆ ಇರುವ ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಅದರಲ್ಲಿಯೂ ವಿಶೇಷವಾಗಿ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ ಪಡೆಯಲು ಅವಕಾಶವಿದೆ ಎಂದರು.
ಗ್ರಾಮ ಪಂಚಾಯತಿ ಕರವಸೂಲಿಗಾರ ಪಾಪಣ್ಣ, ಮಾಜಿ ಅಧ್ಯಕ್ಷ ಮುನಿರಾಜು, ಸದಸ್ಯ ಅಂಬರೀಶ್, ಮುಖಂಡರಾದ ಡಿ.ಟಿ.ನಾರಾಯಣಸ್ವಾಮಿ ಹಾಜರಿದ್ದರು.
- Advertisement -
- Advertisement -
- Advertisement -