21.5 C
Sidlaghatta
Wednesday, July 30, 2025

ಪ್ರಧಾನಮಂತ್ರಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಡಿ.ಧೀರಜ್ ಗೌಡ

- Advertisement -
- Advertisement -

ಜನವರಿ 20 ರಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆಯಲಿರುವ “ಪರೀಕ್ಷಾ ಪೇ ಚರ್ಚಾ” ಕಾರ್ಯಕ್ರಮದಲ್ಲಿ ಭಾಗವಹಿಸಲು ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ಪ್ರೌಡಶಾಲೆಯ 9 ನೇ ತರಗತಿ ವಿದ್ಯಾರ್ಥಿ ಡಿ.ಧೀರಜ್ ಗೌಡ ಆಯ್ಕೆಯಾಗಿದ್ದು, ದೆಹಲಿಗೆ ಹೊರಟಿದ್ದಾನೆ.
ಬೆಂಗಳೂರಿನ ಬಿ.ಜಿ.ದೇವೇಗೌಡ ಹಾಗೂ ಶಾರದ ದಂಪತಿಗಳ ಪುತ್ರನಾದ ಧೀರಜ್ ಗೌಡ ತಾಲ್ಲೂಕಿನ ಮೇಲೂರು ಗ್ರಾಮದ ಪ್ರೌಢಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇದೇ ಗ್ರಾಮದ ಬಿಸಿಎಂ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಯದಲ್ಲಿ ಆಶ್ರಯ ಪಡೆದುಕೊಂಡು ಆಂಗ್ಲಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಪ್ರಧಾನಮಂತ್ರಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಏಕೈಕ ವಿದ್ಯಾರ್ಥಿ ಆಗಿದ್ದು. ಗ್ರಾಮೀಣ ಪ್ರತಿಭೆಯೊಂದು ದೇಶದ ಪ್ರಧಾನಮಂತ್ರಿಯವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವುದು ಶಾಲೆಯ ಶಿಕ್ಷಕರು ಸೇರಿದಂತೆ ಪೋಷಕರಲ್ಲಿ ಸಂತಸ ತಂದಿದೆ. ತಾಲ್ಲೂಕು ಹಾಗೂ ಜಿಲ್ಲೆಗೆ ಕೀರ್ತಿ ತಂದಂತಾಗಿದೆ.
ಜಿಲ್ಲಾ ಅಕ್ಷರ ದಾಸೋಹದ ಸಂಯೋಜಕ ರಘುನಾಥರೆಡ್ಡಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಯನ್ನು ಅಭಿನಂದಿಸಿದರು.
ಮುಖ್ಯಶಿಕ್ಷಕಿ ಸಿ.ಸುಜಾತ, ಶಿಕ್ಷಕರಾದ ಜಿ.ಸವಿತಾ, ಉಮಾಶಂಕರ್, ಪ್ರಸಾದ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!