ಬಡವರಿಗೆ ಎಟುಕುವಂತಹ ಬೆಲೆಗಳಲ್ಲಿ ಓಷಧಿಗಳು ಲಭ್ಯವಿರಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿರುವುದು ಶ್ಲಾಘನೀಯ,ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬುಧವಾರ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಓಷಧಿ ಸಿಗಲಿಲ್ಲ ಅಥವ ಓಷಧಿ ಕೊರತೆಯಿಂದ ಯಾವುದೇ ಬಡವರು ಪ್ರಾಣ ಕಳೆದುಕೊಳ್ಳಬಾರದು ಎಂಬ ಉದ್ದೇಶದಿಂದ ದೇಶಾದ್ಯಂತ ಜನೌಷಧಿ ಕೇಂದ್ರಗಳನ್ನು ಸ್ಥಾಪನೆ ಮಾಡಿದ್ದು ಇಲ್ಲಿ ಎಲ್ಲಾ ಖಾಯಿಲೆಗಳಿಗೂ ಅನ್ವಯವಾಗುವಅತ್ಯಂತ ಗುಣಮಟ್ಟದ ಓಷಧಿಗಳು ಕಡಿಮೆ ಧರದಲ್ಲಿ ಸಿಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್, ಸದಸ್ಯರಾದ ಅಪ್ಸರ್ಪಾಷ, ಸಿಕಂದರ್, ಸಾರ್ವಜನಿಕ ಆಸ್ಪತ್ರೆಯ ವೈದ್ಯೆ ಡಾ.ಸುನೀತ, ತಾಲ್ಲೂಕು ಆಡಳಿತಾಧಿಕಾರಿ ಡಾ.ಅನಿಲ್ಕುಮಾರ್ ಹಾಜರಿದ್ದರು.
- Advertisement -
- Advertisement -
- Advertisement -