Home News ಪ್ರಧಾನಿ ಭೇಟಿಯ ವೇಳೆ ರೈತ ಮುಖಂಡರನ್ನು ಬಂಧಿಸಿರುವ ಕ್ರಮ ಖಂಡಿಸಿ ರೈತರಿಂದ ಪ್ರತಿಭಟನೆ

ಪ್ರಧಾನಿ ಭೇಟಿಯ ವೇಳೆ ರೈತ ಮುಖಂಡರನ್ನು ಬಂಧಿಸಿರುವ ಕ್ರಮ ಖಂಡಿಸಿ ರೈತರಿಂದ ಪ್ರತಿಭಟನೆ

0

ನಗರದ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯ ಮುಂಭಾಗದಲ್ಲಿ ಗುರುವಾರ ರೈತ ಸಂಘದ ಪದಾಧಿಕಾರಿಗಳೊಂದಿಗೆ ಪ್ರತಿಭಟನೆ ನಡೆಸಿ ರೈತ ಮುಖಂಡ ಎಸ್.ಎಂ.ನಾರಾಯಣಸ್ವಾಮಿ ಮಾತನಾಡಿದರು.
ಕೇಂದ್ರ ಸರ್ಕಾರದ ರೈತ ವಿರೋಧಿ ದೋರಣೆಯನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ವೇಳೆ ತುಮಕೂರಿನಲ್ಲಿ ಪ್ರತಿಭಟನೆಗೆ ಮುಂದಾದ ರೈತ ಮುಖಂಡರನ್ನು ಪೊಲೀಸರು ಬಂಧಿಸಿರುವ ಕ್ರಮ ಸರಿಯಲ್ಲ ಎಂದು ಅವರು ತಿಳಿಸಿದರು.
ಕೇಂದ್ರ ಸರ್ಕಾರದ ಹಲವು ನೀತಿಗಳು ಈ ಭಾಗದ ರೈತರಿಗೆ ಮಾರಕವಾಗಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತರನ್ನು ಪೊಲೀಸರು ಬಂಧಿಸುವ ಮೂಲಕ ರೈತರ ಹಕ್ಕನ್ನು ಮೊಟುಕುಗೊಳಿಸಿದ್ದಾರೆ. ಕೂಡಲೇ ಬಂಧಿತ ರೈತರನ್ನು ಬಿಡುಗಡೆ ಗೊಳಿಸಬೇಕು ಎಂದು ಒತ್ತಾಯಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ವೇಣುಗೋಪಾಲ್, ರಾಮಕೃಷ್ಣಪ್ಪ, ದೇವರಾಜ್, ಸೊಣ್ಣಪ್ಪ, ಹಯಾತ್‌ಖಾನ್ ಹಾಜರಿದ್ದರು.

error: Content is protected !!