20.4 C
Sidlaghatta
Wednesday, July 16, 2025

ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

- Advertisement -
- Advertisement -

ರಾಜ್ಯದಲ್ಲಿ ಬಲವಾದ ಪ್ರಾದೇಶಿಕ ಪಕ್ಷವೊಂದು ಅಧಿಕಾರಕ್ಕೆ ಬಂದಾಗ ಮಾತ್ರ ಅಭಿವೃದ್ದಿ ಸಾಧ್ಯ ಎಂದು ನಟ ಉಪೇಂದ್ರ ಹೇಳಿದರು.
ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯ ಪರ ಮತ ಪ್ರಚಾರ ನಡೆಸುವ ಮಾರ್ಗ ಮದ್ಯೆ ಶುಕ್ರವಾರ ನಗರದ ಬಸ್ ನಿಲ್ದಾಣದಲ್ಲಿ ಕಾರಿಳಿದು ನಾಗರೀಕರನ್ನುದ್ದೇಶಿಸಿ ಅವರು ಮಾತನಾಡಿದರು.
ಕೋಲಾರ ಲೋಕಸಭಾ ಚುನಾವಣೆಯ ಉತ್ತಮ ಪ್ರಜಾಕೀಯ ಪಕ್ಷದಿಂದ ಅಭ್ಯರ್ಥಿಯಾಗಿರುವ ಆಂಜಿನಪ್ಪರಿಗೆ ಹೆಚ್ಚಿನ ಮತ ನೀಡಿ ಬೆಂಬಲಿಸುವಂತೆ ಅವರು ಮನವಿ ಮಾಡಿದರು.
ನಮ್ಮ ಪಕ್ಷದ ಗುರುತು ಆಟೋ ರಿಕ್ಷಾ ಆಗಿದ್ದು ಮತದಾರರ ಮಾತೇ ಪಕ್ಷದ ವೇದವಾಕ್ಯ ಮತದಾರರು ಹೇಳಿದಂತೆ ಆಳ್ವಿಕೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಂಜಿನಪ್ಪ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!