ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ

- Advertisement -
- Advertisement -

ನಿವೇಶನ ರಹಿತ ಫಲಾನುಭವಿಗಳನ್ನು ಆಯ್ಕೆಮಾಡುವಾಗ ಯಾವುದೇ ಒತ್ತಡಗಳಿಗೆ ಮಣಿಯದೇ ಪಕ್ಷಾತೀತವಾಗಿ ಆಯ್ಕೆ ನಡೆಸಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರಸಭೆ ಕಾರ್ಯಾಲಯದಲ್ಲಿ ಬುಧವಾರ ನಡೆದ ಆಶ್ರಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ನಗರಸಭೆಗೆ ವಾಜಪೇಯಿ ನಗರ ನಿವೇಶನ ಯೋಜನೆಯಡಿ ಖರೀದಿಸಲಾಗಿರುವ ಅಬ್ಲೂಡು ಗ್ರಾಮದ 22 ಎಕರೆ 20 ಗುಂಟೆ ಜಮೀನಿನಲ್ಲಿ 500 ನಿವೇಶನಗಳನ್ನು ರಚಿಸಲು ಪತ್ರ ಬಂದಿದ್ದು, ಫಲಾನುಭವಿಗಳ ಆಯ್ಕೆಯು ಪಾರದರ್ಶಕವಾಗಿರಬೇಕು. ಸರ್ಕಾರದ ನಿರ್ದೇಶನದಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಬೇಕು. ಖರೀದಿಸಿರುವ ಜಮೀನಿನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ವರದಿಯನ್ನು ತಯಾರಿಸಲು ಸೂಚಿಸಿದರು.
ನಗರಸಭೆ ಆಗಿರುವ ಹಿನ್ನೆಲೆಯಲ್ಲಿ ನಗರ ನಿವೇಶನ ಯೋಜನೆ 2015–16ನೇ ಸಾಲಿಗೆ 600 ನಿವೇಶನಗಳನ್ನು ಹಂಚಿಕೆ ಮಾಡಲು ಗುರಿ ನಿಗದಿಪಡಿಸಿದ್ದು, ಅದರಂತೆ ಅವಶ್ಯ ಜಮೀನು ಖರೀದಿಸಲು ಸ್ಥಳವನ್ನು ಗುರುತಿಸಲು ತಿಳಿಸಿದರು.
ಮುಖ್ಯಾಧಿಕಾರಿ ರಾಮ್ಪ್ರಕಾಶ್, ಆಶ್ರಯ ಸಮಿತಿ ಸದಸ್ಯರಾದ ಎಸ್.ವಿ.ನಾಗರಾಜರಾವ್, ನಾರಾಯಣಸ್ವಾಮಿ, ಅಪರ್ಣಾ ರಾಜ್ಕುಮಾರ್, ಸರ್ದಾರ್ ಈ ಸಭೆಯಲ್ಲಿ ಭಾಗವಹಿಸಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!