ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಕಸಾಪ ವತಿಯಿಂದ ಆಯೋಜಿಸಿದ್ದ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ತ್ತೊಂಬತ್ತನೇ ಶತಮಾನದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು ಭಾರತೀಯರಲ್ಲಿ ತಮ್ಮ ಮೊನಚು ಬರಹ, ಹಾಡುಗಳ ಮುಖಾಂತರ ಕಿಚ್ಚು ತುಂಬಿದವರು ಬಂಗಾಳಿ ಕವಿ, ಕಾದಂಬರಿಕಾರ, ಪತ್ರಕರ್ತ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಎಂದು ಅವರು ತಿಳಿಸಿದರು.
“ವಂದೇ ಮಾತರಂ” ಅಂದರೆ “ತಾಯಿ ವಂದಿಸುವೆ” ಎಂದು. ಈ ಮಾತಿನ ಮೋಡಿಗೆ ಮರುಳಾಗಿ ಲೆಕ್ಕವಿಲ್ಲದಷ್ಟು ಜನ ನಗುನಗುತ್ತಾ ನೇಣು ಗಂಭವನ್ನೇರಿ ಹುತಾತ್ಮರಾಗಿದ್ದಾರೆ. ರಕ್ತದ ಕಣಕಣಗಳಲ್ಲಿ ಕ್ಷಣ ಮಾತ್ರದಲ್ಲಿ ದೇಶಭಕ್ತಿಯ ಆವಾಹನೆ ಮಾಡಿ, ಶತಮಾನಗಳ ಕಾಲ ಭದ್ರವಾಗಿ ಬೇರೂರಿದ್ದ ಬ್ರಿಟಿಷ್ ಸಾಮ್ರಾಜ್ಯದ ಬುಡವನ್ನೇ ಅಲ್ಲಾಡಿಸಿದ್ದ ರಣಮಂತ್ರ ವಂದೇ ಮಾತರಂ. ಇಂದು ಈ ರಣಮಂತ್ರದ ಜನ್ಮದಾತನಾದ ಬಂಕಿಮ ಚಂದ್ರರ ಜನ್ಮದಿನ.
ಮಹರ್ಷಿ ಅರವಿಂದರು ಹೇಳುವಂತೆ, “ಭಾರತ ಕೇವಲ ಒಂದು ಭೂಪ್ರದೇಶವಲ್ಲ, ಅದು ಒಂದು ಶಕ್ತಿಯ ಸ್ವರೂಪ’. ಆದರೆ ಈ ಶಕ್ತಿ ಸ್ವರೂಪಿಣಿಯ ಆರಾಧನೆಯಾಗಬೇಕಿದೆ. ಭಾರತೀಯರು ಜಾತಿ, ಪ್ರಾಂತ್ಯ, ಭಾಷೆ, ಧರ್ಮವನ್ನು ಮೀರಿ ರಾಷ್ಟ್ರೀಯತೆಯನ್ನು ಒಪ್ಪಬೇಕಾಗಿದೆ. ಹಾಗೆ ಆದಾಗಲೇ, ಭಾರತದ ಪುನರುತ್ಥಾನ ಸಾಧ್ಯ. ಇದಕ್ಕೆ ವಂದೇಮಾತರಂ ಸ್ಫೂರ್ತಿಯಾಗುತ್ತದೆ ಎಂದು ಹೇಳಿದರು.
ಮುಖ್ಯಶಿಕ್ಷಕಿ ಎಂ.ವಿ.ವೆಂಕಟರತ್ನಮ್ಮ ಮತ್ತು ಶಿಕ್ಷಕ ಚಾಂದ್ ಪಾಷ ಅವರು ಬಂಕಿಮ ಚಂದ್ರರ ಜೀವನ, ಸಾಹಿತ್ಯದ ಬಗ್ಗೆ ವಿವರಿಸಿದರು. ಸಿಬ್ಬಂದಿ ವೆಂಕಟಮ್ಮ ಹಾಜರಿದ್ದರು.
- Advertisement -
- Advertisement -
- Advertisement -