ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿಯ ಗಂಗನಹಳ್ಳಿ ಸಮೀಪದ ಬಂಡಪ್ಪನಹಳ್ಳಿಯ ಶ್ರೀಶಿರಡಿ ಸಾಯಿ ಆಧ್ಯಾತ್ಮಿಕ ಕೇಂದ್ರದಲ್ಲಿ ನಡೆದ ಶ್ರೀಶಿರಡಿ ಸಾಯಿ ಬಾಬಾ ಭಜನೆ ಕಾರ್ಯಕ್ರಮದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಪತ್ನಿ ಸಮೇತ ಭಾನುವಾರ ಭಾಗವಹಿಸಿದ್ದರು.
ಆಧ್ಯಾತ್ಮಿಕ ಕೇಂದ್ರದ ಆವರಣದಲ್ಲಿ ಬೆಳಗ್ಗೆಯಿಂದಲೂ ನಡೆದ ಭಜನೆ ಕಾರ್ಯಕ್ರಮದಲ್ಲಿ ನೂರಾರು ಮಂದಿ ಸಾಯಿಬಾಬಾ ಭಕ್ತರು ಪಾಲ್ಗೊಂಡು ಸಾಯಿಬಾಬಾ ಸ್ಮರಣೆ ಮಾಡಿದರು. ಭಜನೆ ಅಂಗವಾಗಿ ಸಾಯಿಬಾಬಾ ಮೂರ್ತಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
‘ಸುಮಾರು 1.3 ಕೋಟಿ ರೂಗಳ ವೆಚ್ಚದಲ್ಲಿ ದೇವಾಲಯವನ್ನು ಇಲ್ಲಿ ನಿರ್ಮಿಸಲಾಗುತ್ತಿದ್ದು, ಈ ಭಾಗದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕೇಂದ್ರವಾಗಲಿದೆ. ಮನುಷ್ಯನ ಎಲ್ಲ ಶ್ರಮವೂ ಮನಶ್ಶಾಂತಿಗಾಗಿಯೇ ಆದುದರಿಂದ ಶಾಂತಿ ಮತ್ತು ನೆಮ್ಮದಿಯನ್ನು ಉಂಟುಮಾಡುವ ತಾಣವನ್ನಾಗಿಸುವ ಪ್ರಯತ್ನಕ್ಕೆ ಯಶಸ್ಸು ಸಿಗಲಿ’ ಎಂದು ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ವಿಶೇಷ ಪೂಜೆ ನೆರವೇರಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ಶೀಜಯ ಸಾಯಿ ಮಂಡಳಿ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಕೆ.ಎಸ್.ರುದ್ರೇಶ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಡಾ.ಅಶ್ವತ್ಥ್, ಡಾ.ಸುಬ್ರಮಣ್ಯಂ, ಸಾಯಿ ಚರಿತೆಯ ಕನ್ನಡ ಅನುವಾದಕರಾದ ಅನಂತರಾಂ, ಪ್ರಕಾಶ್ಸ್ವಾಮಿ, ಗೋಪಿನಾಥ್ಸ್ವಾಮಿ, ಆಂಜನೇಯರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ಸತೀಶ್,ಕೊಂಡೇನಹಳ್ಳಿ ನಾರಾಯಣಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -