ತ್ಯಾಗ, ಬಲಿದಾನದ ಹಾಗೂ ಸೋದರತ್ವದ ಸಂಕೇತವಾದ ಪವಿತ್ರ ಬಕ್ರೀದ್ ಹಬ್ಬ ನಗರದಲ್ಲಿ ಶುಕ್ರವಾರ ಸಂಭ್ರಮ- ಸಡಗರದಿಂದ ಆಚರಿಸಲಾಯಿತು.
ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಂಧುಗಳು ನಗರದ ವಿವಿಧ ಬಡಾವಣೆಗಳಿಂದ ಮೆರವಣಿಗೆಯ ಮೂಲಕ ಈದ್ಗಾ ಮೈದಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಅನೇಕರು ತಮ್ಮ ಮನೆಗಳ ಬಳಿ ಬಡವರಿಗೆ ದಾನ ಮಾಡುವ ಮೂಲಕ ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು. ರೇಷ್ಮೆ ವ್ಯಾಪಾರವನ್ನೆ ಮುಖ್ಯ ಕಸುಬನ್ನಾಗಿಸಿಕೊಂಡಿರುವ ಮುಸ್ಲಿಂ ಬಾಂಧವರು ರೈತರನ್ನು ಬಕ್ರೀದ್ ಹಬ್ಬದ ಅಂಗವಾಗಿ ತಮ್ಮ ಮನೆಗಳಿಗೆ ಆಹ್ವಾನಿಸಿ ಸಿಹಿಯನ್ನು ನೀಡಿ, ಶುಭವನ್ನು ಕೋರಿದರು. ಈದ್ಗಾ ಮೈದಾನದಲ್ಲಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಎಂ.ರಾಜಣ್ಣ ಅವರು ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
- Advertisement -
- Advertisement -
- Advertisement -
- Advertisement -