32.1 C
Sidlaghatta
Monday, March 27, 2023

ಬಯಲು ಸೀಮೆ ರೈತ ಮಕ್ಕಳ ಬೈಕ್‌ ರ್ಯಾಲಿ

- Advertisement -
- Advertisement -

ಶಾಶ್ವತ ನೀರಾವರಿ ಹೋರಾಟ ಸಮಿತಿ ಮಾರ್ಗದರ್ಶನದಲ್ಲಿ ಶಾಶ್ವತ ನೀರಾವರಿಗಾಗಿ ಆಗ್ರಹಿಸಿ ಬಯಲು ಸೀಮೆ ರೈತ ಮಕ್ಕಳ ಯುವಶಕ್ತಿಯ ತಂಡ ಕೋಲಾರದ ಸರ್ವಜ್ಞ ಪಾರ್ಕ್‌ನ ನಿರಂತರ ಧರಣಿ ವೇದಿಕೆಯಲ್ಲಿ ಪಾಲ್ಗೊಂಡು ಶಾಶ್ವತ ನೀರಿಗಾಗಿ ಒತ್ತಾಯಿಸುವುದಾಗಿ ಯುವಶಕ್ತಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ವಿಜಯಭಾವರೆಡ್ಡಿ ತಿಳಿಸಿದರು.
ತಾಲ್ಲೂಕಿನ ವಿವಿಧ ಭಾಗಗಳಿಂದ ಬೈಕ್‌ನಲ್ಲಿ ಆಗಮಿಸಿದ್ದ ಯುವಶಕ್ತಿಯ ಸದಸ್ಯರೊಂದಿಗೆ ಬೈಕ್‌ ರ್ಯಾಾಲಿಯ ಮೂಲಕ ಕೋಲಾರಕ್ಕೆ ತೆರಳುವ ಮುನ್ನ ಅವರು ಮಾತನಾಡಿದರು.
ನಿರಂತರ ಬರಗಾಲಕ್ಕೆ ತುತ್ತಾಗಿರುವ ಬಯಲು ಸೀಮೆಯ ನಮ್ಮ ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಗಾಗಿ ಎರಡು ದಶಕಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವುದೇ ಸರ್ಕಾರದಿಮದ ನಮಗೆ ನ್ಯಾಯ ದೊರಕಿಲ್ಲ. ಅಂತರ್ಜಲ ಈಗಾಗಲೇ ಪಾತಾಳಕ್ಕೆ ಕುಸಿದಿದ್ದು, ಶುದ್ಧ ಕುಡಿಯುವ ನೀರು ಮತ್ತು ಕೃಷಿಗಾಗಿ ನೀರಿನ ಭದ್ರತೆಯಿಲ್ಲದೆ ಜನರು ಕಷ್ಟದಲ್ಲಿದ್ದಾರೆ.
ಕೊಳವೆ ಬಾವಿಗಳ ಮೂಲಕ ಸಾಲಕ್ಕೆ ಸಿಲುಕಿ ನಮ್ಮ ರೈತರು ಆತ್ಮಹತ್ಯೆಯ ದಾರಿಯಲ್ಲಿದ್ದಾರೆ. ಸರ್ಕಾರಗಳ ದಿವ್ಯ ನಿರ್ಲಕ್ಷ್ಯಕ್ಕೆ ಬೇಸತ್ತು ಬಯಲುಸೀಮೆಯ ವಿದ್ಯಾವಂತ ಯುವಜನತೆ ಮತ್ತು ರೈತ ಮಕ್ಕಳ ಸಂಘಟನೆಯಾದ ಯುವಶಕ್ತಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಮಾರ್ಗದರ್ಶನದಲ್ಲಿ ನೀರಾವರಿ ಹೋರಾಟಕ್ಕೆ ಧುಮುಕಿದ್ದು, ಹಿಂದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನ ರೈತ ಮಕ್ಕಳ ಸಮಾವೇಶ ಸೇರಿದಂತೆ ವಿವಿಧ ಹೋರಾಟಗಳಲ್ಲಿ ಭಾಗವಹಿಸಿ ನೀರಿಗಾಗಿ ಯುವಜನತೆಯನ್ನು ಸಂಘಟಿಸುವ ಕಾರ್ಯದಲ್ಲಿ ನಿರತವಾಗಿದೆ.
ಈ ನಿಟ್ಟಿನಲ್ಲಿ ಸರ್ಕಾರಗಳನ್ನು ಬಡಿದೆಬ್ಬಿಸಲು ಶಾಶ್ವತ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಕೋಲಾರದಲ್ಲಿ ನಡೆಯುತ್ತಿರುವ ನಿರಂತರ ಧರಣಿಗೆ ಬೆಂಬಲವಾಗಿ ಇಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಬೃಹತ್‌ ಬೈಕ್‌ ರ್ಯಾಲಲಿಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಅಶೋಕ್‌, ಮಂಜುನಾಥ್‌, ಸುನಿಲ್‌. ಶ್ರೀನಾಥ್‌, ಸುಧಾಕರ್‌, ಶರತ್‌, ಸಚಿನ್‌ ಮತ್ತಿತರರು ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!