ಬರ ಪರಿಹಾರ ಕಾರ್ಯಗಳ ಜಾರಿಗೆ ಒತ್ತಾಯಿಸಿ ಡಿ.ವೈ.ಎಫ್.ವೈ ಸಮಿತಿಯ ಸದಸ್ಯರು ತಹಸಿಲ್ದಾರ್ ಅನುಪಸ್ಥಿತಿಯಲ್ಲಿ ಶಿರಸ್ತೆದಾರರಿಗೆ ಗುರುವಾರ ಮನವಿಯನ್ನು ಸಲ್ಲಿಸಿದರರು.
ಚಿಕ್ಕಬಳ್ಳಾಪುರ ಜಿಲ್ಲೆ ನಿರಂತರವಾಗಿ ಬರಗಾಲದಿಂದ ಬಳಲುತ್ತಿದ್ದು ಈ ವರ್ಷವೂ ಸಹ ಸಕಾಲದಲ್ಲಿ ಮಳೆಯಿಲ್ಲದೆ ಹಾಕಿದ ಬೆಳೆಗಳು ಒಣಗಿದ್ದು ರೈತರು ಜೀವನ ನಡೆಸಲು ಕಷ್ಟವಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವದಿಂದ ದನ ಕರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಕೃಷಿ ಕಾರ್ಮಿಕರು ಕೆಲಸವಿಲ್ಲದೆ ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದು, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ಸರ್ಕಾರ ಮೀನ ಮೇಷ ಎಣಿಸುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದು ಗ್ರಾಮೀಣರಿಗೆ ಕೆಲಸ ಇಲ್ಲದಂತಾಗಿದೆ. ಬೀಕರ ಬರಗಾಲ ಎದುರಿಸಲು ಜಿಲ್ಲೆಗೆ ವಿಶೇಷ ಪ್ಯಾಕೇಜನ್ನು ರಾಜ್ಯ ಸರ್ಕಾರ ಘೋಷಿಸಬೇಕು. ಹೋಬಳಿ ಮಟ್ಟದಲ್ಲಿ ಗೋಶಾಲೆಗಳನ್ನು ತೆರೆಯಬೇಕು. ಎಲ್ಲಾ ಹಳ್ಳಿಗಳಲ್ಲೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಶಿರಸ್ತೆದಾರರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಡಿ.ವೈ.ಎಫ್.ವೈ ರಾಜ್ಯ ಸಮಿತಿಯ ಸದಸ್ಯ ಮುನೀಂದ್ರ, ಜಿಲ್ಲಾ ಸಮಿತಿ ಸದಸ್ಯೆ ಲಕ್ಷೀದೇವಮ್ಮ, ಕಾರ್ಯದರ್ಶಿ ಮಂಜುಳಮ್ಮ, ನಟರಾಜ, ಸದಾನಂದ, ಮಂಜುನಾಥ, ನರಸಿಂಹ, ಅಶ್ವತ್ಥಮ್ಮ, ಭಾಗ್ಯಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -