ಸರ್ಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು.ಸರ್ಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿಯವರೆಗೆ ಕಾಲ್ಗಡಿಗೆ ಜಾಥಾ ಮೂಲಕ ಆಗಮಿಸಿ ತಾಲ್ಲೂಕು ಕಚೇರಿಯನ್ನು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜುನಾಥ್, ‘ಚಿಕ್ಕಬಳ್ಳಾಪುರ ಜಿಲ್ಲೆ ಬರಪೀಡಿತ ಪ್ರದೇಶ ಎಂದು ಘೋಷಣೆಯಾಗಿದ್ದು, ಸರ್ಕಾರ ಮಳೆ ಬಾರದೆ ಒಣಗಿರುವ ಬೆಳೆಗಳಿಗೆ ಪರಿಹಾರ ನೀಡುವುದೆಂದು ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆದರೂ ಸಹ ಈವರೆಗೆ ಬರ ಪರಿಹಾರ ರೈತರ ಖಾತೆಗಳಿಗೆ ಜಮೆ ಆಗಿಲ್ಲ. ಬಡವರು ಬಿ.ಪಿ.ಎಲ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಿ ಸುಮಾರು ದಿನಗಳು ಕಳೆದಿದ್ದು ಈವರೆಗೂ ಬಿ.ಪಿ.ಎಲ್ ಕಾರ್ಡ್ ನೀಡಿಲ್ಲ ಹಾಗೂ ಇರುವ ಕಾರ್ಡುಗಳಿಗೆ ಸರಿಯಾಗಿ ಪಡಿತರ ನೀಡುತ್ತಿಲ್ಲ. ಗ್ರಾಮೀಣ ಭಾಗದ ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮೀಣ ಬಾಗದ ಜನರಿಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಯಿಸಿದ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರು ಸರ್ಕಾರ ಬರ ಪರಿಹಾರ ನೀಡುವಲ್ಲಿನ ಲೋಪದೋಷಗಳನ್ನು ನಿವಾರಿಸಲು ತಂತ್ರಾಶ ಸಿದ್ದಪಡಿಸಿದ್ದು ತಂತ್ರಾಶದ ಲೋಪದೋಷದಿಂದ ಬರ ಪರಿಹಾರ ಬೇರೆಯವರ ಖಾತೆಗೆ ಜಮೆ ಆಗಿದೆ. ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದು, ಶೀಘ್ರದಲ್ಲೆ ಅವರವರ ಖಾತೆಗಳಿಗೆ ಪರಿಹಾರ ಜಮಾ ಮಾಡಲಾಗುವುದು. ಪಡಿತರ ಚೀಟಿ ನೀಡುವಲ್ಲಿ ಅನೇಕ ಲೋಪದೋಷಗಳಿದ್ದು, ಕೆಲವೇ ತಿಂಗಳುಗಳಲ್ಲಿ ಅರ್ಜಿದಾರರಿಗೆ ಪಡಿತರ ಚೀಟಿಯನ್ನು ಸರ್ಕಾರವೇ ಪೋಸ್ಟ್ ಮೂಲಕ ಕಳುಹಿಸುತ್ತಿದ್ದು, ಅರ್ಜಿದಾರರ ಕೈ ಸೇರಲಿದೆ. ಅಧಿಕಾರಿಗಳನ್ನು ವಿಚಾರಣೆ ಮಾಡಿ ಗಾಮೀಣ ಬಾಗದ ಸಮಸ್ಯೆಗಳನ್ನು ಪರಿಹಾರ ಮಾಡಲಾಗುವುದೆಂದು ತಿಳಿಸಿದರು.
ತಹಸಿಲ್ದಾರ್ ಅಜಿತ್ ಕುಮಾರ್ ರೈ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರು ಮನವಿ ಪತ್ರ ಸಲ್ಲಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಮಂಜುನಾಥ್, ರಾಮಯ್ಯ, ವೆಂಕಟೇಶ್, ಗೊವಿಂದಪ್ಪ, ನರಸಿಂಹಪ್ಪ, ಲಕ್ಷ್ಮೀನರಸಿಂಹಪ್ಪ, ಲಕ್ಷ್ಮೀನಾರಾಯಣ ಹಾಜರಿದ್ದರು.
- Advertisement -
- Advertisement -
- Advertisement -
- Advertisement -