25.1 C
Sidlaghatta
Tuesday, December 5, 2023

ಬಸವಜಯಂತ್ಯುತ್ಸವ ಆಚರಣೆ

- Advertisement -
- Advertisement -

ತಾಲ್ಲೂಕಿನ ವಿವಿದೆಡೆ ಮಂಗಳವಾರ ಬಸವಜಯಂತ್ಯುತ್ಸವವನ್ನು ಬಸವಣ್ಣ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಿದರು.
ನಗರದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯ, ಉಲ್ಲೂರುಪೇಟೆಯ ಜೋಡಿ ಬಸವಣ್ಣ ದೇವಾಲಯ, ತಾಲ್ಲೂಕಿನ ಶೆಟ್ಟಿಹಳ್ಳಿ, ಮುಂತಾದೆಡೆ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಿ, ಹೆಸರುಬೇಳೆ ಪಾನಕ ವಿತರಣೆ ನಡೆಯಿತು.
ನಗರದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯದಲ್ಲಿ ತಾಲ್ಲೂಕು ಆಡಳಿತ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ಪರವಾಗಿ ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ನಾಗರಾಜಶೆಟ್ಟಿ, ರಜಸ್ವ ನಿರೀಕ್ಷಕರಾದ ಸುಬ್ರಮಣಿ, ಕುಮಾರ್ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬಸವೇಶ್ವರ ಸೇವಾ ಟ್ರಸ್ಟ್ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜರಾವ್, ಬಿ.ಜಗದೀಶ್, ಎಂ.ಮಂಜುನಾಥ, ನಿರಂಜನ್ ಬಾಬು, ಕೆ.ಜೆ.ಗಿರಿಧರ್, ರಂಜಿತ್, ಕೆ.ಬಿ.ಮಲ್ಲಿಕಾರ್ಜುನ್, ನಾಗರಾಜ್, ಮಲ್ಲಿಕಾರ್ಜುನಯ್ಯ, ಸಿದ್ದಲಿಂಗ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!