ತಾಲ್ಲೂಕಿನ ಕುಂದಲಗುರ್ಕಿಗೆ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ರೂಟ್ ನಂಬರ್ 57 ರ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಸ್ಟೇರಿಂಗ್ ಮುರಿದು ರಸ್ತೆಯ ಪಕ್ಕದ ಹಳ್ಳಕ್ಕೆ ಇಳಿದ ಘಟನೆ ಗುರುವಾರ ನಡೆದಿದೆ.
ಬಸ್ಸಿನಲ್ಲಿ ಎಂಟು ಮಂದಿ ಪ್ರಯಾಣಿಕರಿದ್ದು, ನಿರ್ವಾಹಕ ಕನಕಪ್ಪ ನೆಲವಾಸಿ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಗಾಯಗೊಂಡವರು ಚಿಂತಾಮಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.
ಪ್ರತಿನಿತ್ಯ ಸಂಚರಿಸುವ ಈ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಪ್ರಯಾಣಿಸುತ್ತಾರೆ. ಒಂದು ವೇಳೆ ಶಾಲಾ ಕಾಲೇಜುಗಳ ಮಕ್ಕಳು ಪ್ರಯಾಣಿಸುವಾಗ ಈ ಅನಾಹುತ ಸಂಭವಿಸಿದ್ದಿದ್ದರೆ ಯಾರು ಹೊಣೆ. ಸಾರಿಗೆ ಇಲಾಖೆಯ ಅಧಿಕಾರಿಗಳು ಸಮರ್ಪಕವಾದ ಸುಸ್ಥಿತಿಯಲ್ಲಿರುವ ಬಸ್ಸನ್ನು ನೀಡದೆ ಗ್ರಾಮಾಂತರ ಪ್ರದೇಶಗಳಲ್ಲಿ ಅನಾಹುತಕ್ಕೆ ಕಾರಣರಾಗುತ್ತಿದ್ದಾರೆ ಎಂದು ನಾಗರಿಕರು ಆಕ್ರೋಷ ವ್ಯಕ್ತಪಡಿಸಿದರು.
- Advertisement -
- Advertisement -
- Advertisement -
- Advertisement -