18.9 C
Sidlaghatta
Wednesday, February 25, 2026

ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಸಂತೆ

- Advertisement -
- Advertisement -

ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿಯಿರುವ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಬುಧವಾರ ೧ ರಿಂದ ೪ ನೇ ತರಗತಿ ಮಕ್ಕಳಿಂದ ಸಪ್ತ ಸೂತ್ರ ಶಿಕ್ಷಣ ಯೋಜನೆಯಡಿ ಆಯೋಜಿಸಲಾಗಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನುದ್ದೇಶಿಸಿ ಬಿಜಿಎಸ್ ಪ್ರಾಂಶುಪಾಲ ಆರ್.ಮಹದೇವ್ ಮಾತನಾಡಿದರು.
ಸಾಮಾಜಿಕ ಬದುಕು, ಪ್ರಪಂಚ ಜ್ಞಾನ, ಜೀವನದ ಮೌಲ್ಯಗಳನ್ನು ಕಲಿಯದ ಹೊರತು ಶಿಕ್ಷಣ ಪರಿಪೂರ್ಣವಾಗುವುದಿಲ್ಲ ಎಂದು ಹೇಳಿದರು.
ಮಕ್ಕಳಿಗೆ ಬರೀ ಪಠದಲ್ಲಿನ ವಿಷಯಗಳನ್ನು ಕಲಿಸಿದರೆ ಸಾಲದು, ಜೊತೆಯಲ್ಲಿ ಮಕ್ಕಳಲ್ಲಿ ಚಿಕ್ಕಂದಿನಿಂದಲೇ ಜೀವನದ ಮೌಲ್ಯಗಳನ್ನು ಕಲಿಸಬೇಕು. ತಮ್ಮ ಪೋಷಕರ ಕಷ್ಟ ಸುಖಗಳು ಮಕ್ಕಳಿಗೆ ತಿಳಿಯಬೇಕು. ಹೊರಗಿನ ಜಗತ್ತಿನಲ್ಲಿ ಜೀವನ ಹೇಗೆ ರೂಪಿಸಿಕೊಳ್ಳಬೇಕು ಎಂಬುದನ್ನು ತಿಳಿಸುವ ಉದ್ದೇಶದಿಂದ ಮಕ್ಕಳ ಸಂತೆ ಆಯೋಜಿಸಿದ್ದೇವೆ. ಪುಟಾಣಿ ಮಕ್ಕಳ ಈ ಸಂತೆಯಲ್ಲಿ ಭಾಗವಹಿಸಿರುವ ಪೋಷಕರೂ ಹಾಗೂ ಶಾಲಾ ಸಿಬ್ಬಂದಿ ಸಂತೆಯಲ್ಲಿರುವ ಎಲ್ಲ ವಸ್ತುಗಳನ್ನು ಖರೀದಿಸುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಿ ಎಂದರು.
ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ತ್ಯಾಗರಾಜ್ ಮಾತನಾಡಿ, ಮಕ್ಕಳಲ್ಲಿ ವ್ಯಾಪಾರಿ ಮನೋಭಾವ ಬೆಳೆಸುವುದು, ವಾಣಿಜ್ಯ ದೃಷ್ಟಿಕೋನ ಹಾಗೂ ವಸ್ತುಗಳನ್ನು ಖರೀದಿಸುವಾಗ ಕಲಿಯಬೇಕಾದ ಮಾಪನಗಳನ್ನು ಪ್ರಾಯೋಗಿಕವಾಗಿ ಮಕ್ಕಳಲ್ಲಿ ಕಲಿಸಲು ಮಕ್ಕಳ ಸಂತೆ ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಕೆಂಪರೆಡ್ಡಿ, ಮಕ್ಕಳ ಪೋಷಕರು, ಶಾಲಾ ಸಿಬ್ಬಂದಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!