ಬಿಜೆಪಿ ಕಾರ್ಯಕರ್ತರಿಂದ ರಕ್ಷಾಬಂಧನ ಆಚರಣೆ

- Advertisement -
- Advertisement -

ರಕ್ಷಾಬಂಧನ ಸೋದರ ಸಂಬಂಧ, ಪ್ರೀತಿ ಮಮತೆಯ ಪ್ರತೀಕದ ಹಬ್ಬವಾಗಿದ್ದು ಹೆಣ್ಣನ್ನು ಗೌರವ ಭಾವನೆಯಿಂದ ನೋಡುವ ಮನೋಭಾವ ಎಲ್ಲರಲ್ಲೂ ಮೂಡಬೇಕು ಎಂದು ಬಿಜೆಪಿ ಮುಖಂಡ ಡಿ.ಆರ್.ಶಿವಕುಮಾರಗೌಡ ತಿಳಿಸಿದರು.
ನಗರದ ಚಿಂತಾಮಣಿ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬಿಜೆಪಿ ತಾಲ್ಲೂಕು ಘಟಕದಿಂದ ಆಚರಿಸಿದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಹೋದರತ್ವದ ಮಹತ್ವ ಸಾರುವ ರಕ್ಷಾಬಂಧನವು ವಿಶ್ವ ಭ್ರಾತೃತ್ವ ಸಾರುವ ಮಹತ್ವದ ಹಬ್ಬವಾಗಿದೆ. ರಕ್ಷಾಬಂಧನದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮಲ್ಲಿನ ದುರ್ಗುಣ, ದುಶ್ಚಟ, ದುರ್ಬಲತೆಗಳನ್ನು ದೂರ ಮಾಡುವ ಮೂಲಕ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಮಾತನಾಡಿ, ರಾಖಿ ಹಬ್ಬವು ಕೇವಲ ಸಹೋದರ ಮತ್ತು ಸಹೋದರಿಯರಿಗೆ ಸೀಮಿತವಾದುದಲ್ಲ. ಭಾರತ ಮಾತೆಯನ್ನು ರಕ್ಷಿಸಲು ಸಂಕಲ್ಪ ತೊಡುವ ಹಬ್ಬವೂ ಹೌದು. ವಿಭಿನ್ನತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದಲ್ಲಿರುವ ಎಲ್ಲರೂ ದೇಶೋದ್ಧಾರದ ಕುರಿತಂತೆ ಆಲೋಚಿಸುವ ಹಾಗೂ ಒಗ್ಗೂಡುವ ಹಬ್ಬವೂ ಇದಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ರಕ್ಷಾಬಂಧನವನ್ನು ಪರಸ್ಪರ ಕಟ್ಟಿಕೊಂಡು ಇತರರಿಗೂ ಕಟ್ಟಿದರು.
ಮುಖಂಡರಾದ ಬೈರರೆಡ್ಡಿ, ಸೋಮಣ್ಣ, ಮಂಜುನಾಥ, ಮಂಜುಳಮ್ಮ, ಸುಜಾತಮ್ಮ, ಸುಶೀಲಮ್ಮ, ಗಾಯಿತ್ರಮ್ಮ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!