‘ಗಿಡ ನೆಡಿ ಪರಿಸರ ಉಳಿಸಿ’ ಎಂಬ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡುತ್ತಿದ್ದೇವೆ. ಈಗ ನೆಟ್ಟ ಗಿಡಗಳು ಬ್ಯಾಂಕಿನಲ್ಲಿಟ್ಟ ಠೇವಣಿಯಿದ್ದಂತೆ. ಮುಂದಿನ ಪೀಳಿಗೆಗೆ ಉತ್ತಮ ಆಮ್ಲಜನಕ, ಹಸಿರು ಪರಿಸರ, ಮಳೆ ಮುಂತಾದ ಹಲವು ಉಪಯುಕ್ತತೆಗಳು ಅವುಗಳಿಂದ ಲಭ್ಯವಾಗುತ್ತವೆ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿ. ನಂದೀಶ್ ತಿಳಿಸಿದರು.
ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಶಾಲಾ ಆವರಣದಲ್ಲಿ ಭಾನುವಾರ ಸುಮಾರು 70 ಗಿಡಗಳನ್ನು ಬಿಜೆಪಿ ಪಕ್ಷದ ವತಿಯಿಂದ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗಿಡಗಳನ್ನು ನೆಡುವುದರೊಂದಿಗೆ ಅವುಗಳ ಪಾಲನೆಯೂ ಅಗತ್ಯವಿದೆ. ಶಾಲೆಯ ಮಕ್ಕಳು ನಿರ್ವಹಣೆ ಮಾಡಲು ಅನುಕೂಲವಾಗುವ ರೀತಿಯಲ್ಲಿ ಹನಿನೀರಾವರಿ ಕೊಳವೆಗಳನ್ನು ಅಳವಡಿಸಿಕೊಡಲಾಗುವುದು. ಇದರಿಂದ ನೀರು ಪೋಲಾಗುವುದು ತಪ್ಪುತ್ತದೆ. ಗಿಡಗಳನ್ನು ಅರಣ್ಯ ಇಲಾಖೆಯವರು ಉಚಿತವಾಗಿ ನೀಡಿದ್ದಾರೆ. ಬಿಜೆಪಿ ಪಕ್ಷದ ವತಿಯಿಂದ ಗುಣಿಗಳನ್ನು ತೋಡಿಸಿ, ಕೊಟ್ಟಿಗೆ ಗೊಬ್ಬರ ಮತ್ತು ನೀರು ಹಾಕಿಸಿ ಗಿಡಗಳನ್ನು ನೆಟ್ಟಿದ್ದೇವೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀರಾಮರೆಡ್ಡಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಭಾಸ್ಕರರೆಡ್ಡಿ, ಮುನಿರಾಜು, ಸದಸ್ಯರಾದ ಸುರೇಶ್, ದಾಮೋದರ್, ಮಂಜುಳಮ್ಮ, ಬೈರರೆಡ್ಡಿ, ಪ್ರತಾಪ್, ಪುರುಷೋತ್ತಮ್, ಗಂಗಾಧರ್, ಗಾಯತ್ರಮ್ಮ, ಅಶ್ವಕ್ ಅಹಮದ್, ಕೃಷ್ಣಾರೆಡ್ಡಿ, ದೊಣ್ಣಹಳ್ಳಿ ರಾಮಣ್ಣ, ನರಸಿಂಹಯ್ಯ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -