20.6 C
Sidlaghatta
Tuesday, July 15, 2025

ಬಿಜೆಪಿ ಪಕ್ಷದ ವತಿಯಿಂದ ನವಶಕ್ತಿ ಸಮಾವೇಶ

- Advertisement -
- Advertisement -

ಈ ಭಾರಿಯ ವಿಧಾನಸಭೆ ಚುನಾವಣೆಯಲ್ಲಿ ಮುಖಂಡರೂ ಸೇರಿದಂತೆ ಕಾರ್ಯಕರ್ತರು ಸಮರ್ಥವಾಗಿ ದುಡಿದಾಗ ಮಾತ್ರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲ್ಲಲು ಸಾಧ್ಯವಾಗುತ್ತದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಸಿ.ನಂದೀಶ್ ಹೇಳಿದರು.
ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್ ಬಳಿಯಿರುವ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತಾಲೂಕು ಬಿಜೆಪಿ ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.
ಚುನಾವಣಾ ಆಯೋಗ ಈಗಾಗಲೇ ಚುನಾವಣೆ ದಿನಾಂಕ ಘೋಷಿಸಿದ್ದು ಮುಂದಿನ ಒಂದು ತಿಂಗಳ ಕಾಲ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು ಎಂದರು.
ಬಿಜೆಪಿ ಜಿಲ್ಲಾ ಉಸ್ತುವಾರಿ ಕೃಷ್ಣಾರೆಡ್ಡಿ, ಕಿಸಾನ್ ಮೋರ್ಚಾ ಸದಸ್ಯ ಚಲ್ಲಪಲ್ಲಿ ನರಸಿಂಹರೆಡ್ಡಿ, ಡಿ.ಆರ್.ಶಿವಕುಮಾರಗೌಡ, ನಾರ್ತ್ ಈಸ್ಟ್ ಸುರೇಶ್, ಸುರೇಂದ್ರಗೌಡ, ನಗರ ಸಭೆ ಸದಸ್ಯ ರಾಘವೇಂದ್ರ, ದಾಮೋಧರ್, ಸುಜಾತಮ್ಮ, ಮಂಜುಳಮ್ಮ, ರತ್ನಮ್ಮ, ಸುಶೀಲಮ್ಮ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!