ತಾಲ್ಲೂಕಿನಲ್ಲಿ ಬಿಜೆಪಿ ಪಕ್ಷವನ್ನು ಉತ್ತಮವಾಗಿ ಸಂಘಟಿಸಿ, ಮುಂದಿನ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆಗೆ ಸಿದ್ಧಮಾಡಿಕೊಳ್ಳುವುದಾಗಿ ಬಿಜೆಪಿ ಮುಖಂಡ ಸುರೇಶ್ ತಿಳಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಶನಿವಾರ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯ ಅಂಗವಾಗಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಸುಮಾರು ೨೦ ಸಾವಿರಕ್ಕೂ ಅಧಿಕ ಬಿಜೆಪಿ ಮತದಾರರು ಇದ್ದಾರೆ. ಈ ಹಿಂದೆ ಮುಖಂಡರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರೂ ಕೂಡಾ ಪಕ್ಷ ಯಶಸ್ಸು ಕಂಡಿಲ್ಲ. ಬೆಂಗಳೂರಿನ ಹೆಬ್ಬಾಳದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ದುಡಿದಿರುವ ಅನುಭವವಿದೆ. ಕೇಂದ್ರ ನಾಯಕರ ಸೂಚನೆ ಮೇರೆಗೆ ಶಿಡ್ಲಘಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಲು ಬಂದಿದ್ದೇನೆ. ಯಾವುದೇ ಕಾರಣಕ್ಕೂ ವಾಪಸ್ಸು ಹೋಗುವುದಿಲ್ಲ. ಇಲ್ಲೆ ಆಸ್ತಿ ಇದೆ. ಉತ್ತಮ ಜನ ಸಂಪರ್ಕವಿದೆ. ಮಾಜಿ ಶಾಸಕರು, ಹಾಲಿ ಶಾಸಕರು ಎಲ್ಲರೊಂದಿಗೂ ವಿಶ್ವಾಸವಿದೆ. ತಳಮಟ್ಟದಿಂದ ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತರಲು ಬೇಕಾಗಿರುವ ಎಲ್ಲಾ ಸಾಮರ್ಥ್ಯ ನನ್ನಲ್ಲಿದೆ. ನಿಷ್ಠೆಯಿಂದ ದುಡಿಯುತ್ತೇನೆ ಎಂದರು.
ಮತ್ತೊಬ್ಬ ಬಿಜೆಪಿ ಮುಖಂಡ ಗುರುವಯ್ಯಯಾದವ್ ಮಾತನಾಡಿ, ನಾನು ಮೂಲತಃ ಆಂದ್ರದಿಂದ ಬಂದಿದ್ದರೂ, ನನ್ನ ಚಟುವಟಿಕೆಗಳು ಕರ್ನಾಟಕದಲ್ಲಿಯೇ ಇವೆ, ಶಿಡ್ಲಘಟ್ಟದಲ್ಲಿ ಬಿಜೆಪಿ ಸಂಘಟನೆ ಮಾಡಲು ಬಂದಿದ್ದೇನೆ. ಪಕ್ಷದಿಂದ ಯಾರಿಗೆ ಟಿಕೆಟ್ ಕೊಟ್ಟರೂ ಪ್ರಾಮಾಣಿಕವಾಗಿ ದುಡಿಯುತ್ತೇವೆ ಎಂದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುರೇಂದ್ರಗೌಡ, ರಾಘವೇಂದ್ರ, ಬಿ.ಸಿ.ನಂದೀಶ್, ದಾಮೋದರ್, ಮಂಜುಳಮ್ಮ, ಹಾಜರಿದ್ದರು.
- Advertisement -
- Advertisement -
- Advertisement -