ನೀರಾವರಿ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಬಯಲುಸೀಮೆ ಪ್ರದೇಶಗಳಾದ ಕೋಲಾರ ಚಿಕ್ಕಬಳ್ಲಾಪುರ ಜಿಲ್ಲೆಗಳಲ್ಲಿ ಅಂತರ್ಜಲ ಕುಸಿದು ಕುಡಿಯುವ ನೀರಿಗೂ ಪರದಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಕೂಡಲೇ ಶಾಶ್ವತ ನೀರಾವರಿ ಯೋಜನೆಗೆ ಪೂರಕವಾಗಿರುವ ಎತ್ತಿನಹೊಳೆ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಎಂದು ಒತ್ತಾಯಿಸಿದರು.
ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿವರೆಗೂ ಮೆರವಣಿಗೆ ಮೂಲಕ ಸಾಗಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ತಾಲ್ಲೂಕು ಬಿಜೆಪಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಯುವಮೋರ್ಚಾ ಅಧ್ಯಕ್ಷ ಕೆ.ಆರ್.ರವಿಚಂದ್ರ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ನರೇಶ್, ಉಪಾಧ್ಯಕ್ಷರಾದ ಶ್ರೀರಾಮ್, ನಾಗೇಂದ್ರ, ಅನಿಲ್, ಮಂಜುಳಮ್ಮ, ಸುಜಾತಮ್ಮ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -