Home News ಬಿಸಿಯೂಟ ಆಹಾರಧಾನ್ಯಗಳ ಅಕ್ರಮ ಸಾಗಾಣಿಕೆಯ ತಡೆ

ಬಿಸಿಯೂಟ ಆಹಾರಧಾನ್ಯಗಳ ಅಕ್ರಮ ಸಾಗಾಣಿಕೆಯ ತಡೆ

0

ಶಾಲಾ ಮಕ್ಕಳಿಗೆ ಮದ್ಯಾಹ್ನದ ಬಿಸಿಯೂಟಕ್ಕೆ ಸರಬರಾಜು ಮಾಡಿರುವ ಆಹಾರಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಅನುದಾನಿತ ಶಾಲೆಯೊಂದರ ವಾಹನವನ್ನು ನಾಗರಿಕರು ಗುರುವಾರ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
6nov3ತಾಲ್ಲೂಕಿನ ವೈ.ಹುಣಸೇನಹಳ್ಳಿ ಗೇಟ್ನಲ್ಲಿರುವ ಎಸ್.ಆರ್.ಇ.ಟಿ. ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲಾ ಮಕ್ಕಳಿಗೆ ಬಿಸಿಯೂಟಕ್ಕೆಂದು ಅಕ್ಷರದಾಸೋಹ ಇಲಾಖೆಯಿಂದ ಸರಬರಾಜು ಮಾಡಿದ್ದ ಆಹಾರ ಧಾನ್ಯಗಳಲ್ಲಿ ೧೧ ಮೂಟೆ ಗೋದಿ ೦೩ ಮೂಟೆ ತೊಗರಿಬೆಳೆ ಹಾಗೂ ೫೦ ಕೆ.ಜಿ. ಎಣ್ಣೆಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಸ್ಥಳೀಯ ನಾಗರಿಕರು ಕೊತ್ತನೂರು ಗೇಟ್ನಲ್ಲಿ ವಾಹನವನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಬಗ್ಗೆ ತಾಲ್ಲೂಕಿನ ಅಕ್ಷರದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ರಂಗಪ್ಪ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶಾಲಾ ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದುಕೊಂಡಿರುವ ಗ್ರಾಮಾಂತರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!